8:05 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ: ಶಾಸಕ ಕಾಮತ್ ಮೇಲೆ ಎಫ್ ಐಆರ್ ಗೆ ವಿರೋಧ

05/03/2025, 00:32

ಬೆಂಗಳೂರು(reporterkarnataka.com): ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಶಾಸಕ ವೇದವ್ಯಾಸ ಕಾಮತ್ ಬೆಂಬಲಕ್ಕೆ ನಿಂತರು.


ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ ಈ ರೀತಿಯಾಗಿ ಸುಳ್ಳು ಪ್ರಕರಣಗಳು ದಾಖಲಾಗುತ್ತಾ ಹೋದರೆ ಇನ್ನು ಮೇಲೆ ಯಾವ ಕಾರ್ಯಕ್ರಮಕ್ಕೂ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧಾರ್ಮಿಕ ಕಾರ್ಯಕ್ರಮ ಮುಗಿಸಿ ಮರಳು ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ನನಗೆ ಘೇರಾವ್ ಹಾಕಲು ಯತ್ನಿಸಿದ್ದು ಮಾತ್ರವಲ್ಲದೇ ನನ್ನ ಜೊತೆಗಿದ್ದ ಪರಿಶಿಷ್ಟ ಸಮುದಾಯದ ಬಂಧುವೊಬ್ಬನ ಮೇಲೆ ಹಲ್ಲೆ ನಡೆಸಿ, ನಮ್ಮ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ಕಾಮತ್ ರವರು ಸದನದಲ್ಲಿ ಹೇಳಿದರು.
ಅಂತಿಮವಾಗಿ ಗೃಹ ಸಚಿವರು ಈ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಸೂಕ್ತ ಕ್ರಮಕೈಗೊಳ್ಳುವುದಾಗಿ ಸದನಕ್ಕೆ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು