8:05 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Health Minister | ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ: ಸಚಿವ ದಿನೇಶ್ ಗುಂಡೂರಾವ್

05/03/2025, 23:05

ಬೆಂಗಳೂರು (reporterkarnataka.com):ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಸಭೆಯ ಅಧಿವೇಶನದಲ್ಲಿ ಇಂದು ಸದಸ್ಯರಾದ ಶರಣಗೌಡ ಕಂದಕೂರ ಅವರು ಕಳಪೆ ಗುಣಮಟ್ಟದ ಔಷಧಿ ಪೂರೈಕೆಯಿಂದ ಬಾಣಂತಿಯರು ಸರಣಿ ಸಾವನ್ನಪ್ಪಿರುವ ಕುರಿತು ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು, ಔಷಧಿ ಸರಬರಾಜನ್ನು ನಿಲ್ಲಿಸಲಾಗಿದೆ. 12 ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲಾಗಿದೆ.
ಕಾನೂನಿನ ಪ್ರಕಾರ ಹೋಗಬೇಕಾಗಿರುವುದರಿಂದ ನಮ್ಮ ಕಡೆಯಿಂದ ಆಗುವ ಕ್ರಮಕೈಗೊಳ್ಳಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು,ಮುಂದಿನ ದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು