2:34 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ ಸಚಿವ ಸಂತೋಷ ಲಾಡ್ ಮಾಹಿತಿ

06/03/2025, 10:12

ಬೆಂಗಳೂರು(reporterkarnataka.com): ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್
ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸದನಕ್ಕೆ ತಿಳಿಸಿದರು.
ಸದಸ್ಯ ಮಹೇಶ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ಸಹ ನಕಲಿ ಕಾರ್ಡ್ ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಅವರು ಹೇಳಿದರು.
2022ರಿಂದ ಈವರೆಗೆ ಮದುವೆ ಧನ ಸಹಾಯಕ್ಕಾಗಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು.
ತಿರಸ್ಕರಿಸಿದ ಅರ್ಜಿಗಳಿಗೆ ಸಹಕಾರಣವನ್ನು ನಮೂದಿಸಲಾಗಿರುತ್ತದೆ ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು.
ಇನ್ನೂ ಕೆಲದಿನಗಳಲ್ಲಿ ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಶೀಘ್ರ ಆರಂಭಿಸಲಾಗುತ್ತಿದ್ದು,ಅವುಗಳಿಗೆ ಒದಗಿಸಲಾಗಿರುವ ವಾಹನಗಳ ಮೂಲಕ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಿ ಪರಿಶೀಲಿಸಿ ಶಿಫಾರಸ್ಸು ಮಾಡಲಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು