7:09 PM Thursday16 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು

ಇತ್ತೀಚಿನ ಸುದ್ದಿ

Kannada Literature | ಕನ್ನಡ ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷರಾಗಿ ಡಾ.ಕೊಲಚಪ್ಪೆ ಗೋವಿಂದ ಭಟ್ ಆಯ್ಕೆ

06/03/2025, 10:36

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಾಸರಗೋಡು ಕನ್ನಡ ಭವನ ಗ್ರಂಥಾಲಯ ರೂವಾರಿಗಳಾದ ಡಾ. ವಾಮನ್ ರಾವ್ -ಸಂಧ್ಯಾರಾಣಿ ದಂಪತಿ ಸ್ಥಾಪಿಸಿದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ “ಕೀರಿಕಾಡು ಮಾಸ್ಟರ್ ವಿಷ್ಣು ಭಟ್ “ಸಂಸ್ಮರಣೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಲೇಖಕ ಡಾ. ಕೊಲಚಪ್ಪೆ ಗೋವಿಂದ ಭಟ್ , ಕಾರ್ಯದರ್ಶಿಯಾಗಿ ಅಪೂರ್ವ ಕಾರಂತ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಚು. ಸಾ. ಪ. ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ನಾಮನಿರ್ದೇಶನ ಮಾಡಿದರು. ಇನ್ನೊರ್ವ ಸಂಚಾಲಕರಾದ ಡಾ. ಶಾಂತ ಪುತ್ತೂರು ಅವರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಡಾ. ಕೆ. ಗೋವಿಂದ ಭಟ್ ಮತ್ತು ಅಪೂರ್ವ ಕಾರಂತ್ ಇವರಿಗೆ ಸಂಸ್ಥೆಯ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಹಾಗೂ ಗೌರವಾಧ್ಯಕ್ಷರಾದ ಶಿಕ್ಷಣ ತಜ್ಞ, ಸಾಹಿತಿ ವಿ. ಬಿ. ಕುಳಮರ್ವ ಕನ್ನಡ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್, ಅಪೂರ್ವ ಕಾರಂತ್ ಅವರಿಗೆ ಶಾಲು ಹೊದಿಸಿ, ಅಧಿಕಾರ ಪತ್ರ, ಕಾರ್ಯಸೂಚಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾಧ್ಯಕ್ಷರಾದ ವಿರಾಜ್ ಅಡೂರ್, ಕೋಶಾಧಿಕಾರಿ ಸಂಧ್ಯಾರಾಣಿ, ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್, ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ, ಕರ್ನಾಟಕ ರಾಜ್ಯ ಸಂಚಾಲಕಿ ಡಾ ಶಾಂತ ಪುತ್ತೂರು ಜತೆಗಿದ್ದರು. ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್ ತನ್ನ ಕೃತಜ್ಞತಾ ಭಾಷಣದಲ್ಲಿ “ದಕ್ಷಿಣ ಕನ್ನಡ ಜಿಲ್ಲಾ ಘಟಕವನ್ನು ಶೀಘ್ರದಲ್ಲಿ ವಿಸ್ತರಿಸಿ ಬರುವ ಏಪ್ರಿಲ್ ತಿಂಗಳಲ್ಲಿ 100ಮಂದಿ ಚುಟುಕು ಕವಿಗಳ ಕವಿಗೋಷ್ಠಿಯೊಂದಿಗೆ ಮಂಗಳೂರಿನಲ್ಲಿ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು