2:49 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ: ಶಾಸಕ ಕಾಮತ್ ಮೇಲೆ ಎಫ್ ಐಆರ್ ಗೆ ವಿರೋಧ

06/03/2025, 22:02

ಬೆಂಗಳೂರು(reporterkarnataka.com): ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಶಾಸಕ ವೇದವ್ಯಾಸ ಕಾಮತ್ ಬೆಂಬಲಕ್ಕೆ ನಿಂತರು.


ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ ಈ ರೀತಿಯಾಗಿ ಸುಳ್ಳು ಪ್ರಕರಣಗಳು ದಾಖಲಾಗುತ್ತಾ ಹೋದರೆ ಇನ್ನು ಮೇಲೆ ಯಾವ ಕಾರ್ಯಕ್ರಮಕ್ಕೂ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧಾರ್ಮಿಕ ಕಾರ್ಯಕ್ರಮ ಮುಗಿಸಿ ಮರಳು ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ನನಗೆ ಘೇರಾವ್ ಹಾಕಲು ಯತ್ನಿಸಿದ್ದು ಮಾತ್ರವಲ್ಲದೇ ನನ್ನ ಜೊತೆಗಿದ್ದ ಪರಿಶಿಷ್ಟ ಸಮುದಾಯದ ಬಂಧುವೊಬ್ಬನ ಮೇಲೆ ಹಲ್ಲೆ ನಡೆಸಿ, ನಮ್ಮ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ಕಾಮತ್ ರವರು ಸದನದಲ್ಲಿ ಹೇಳಿದರು.
ಅಂತಿಮವಾಗಿ ಗೃಹ ಸಚಿವರು ಈ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಸೂಕ್ತ ಕ್ರಮಕೈಗೊಳ್ಳುವುದಾಗಿ ಸದನಕ್ಕೆ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು