7:47 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್

06/03/2025, 23:20

ಬೆಂಗಳೂರು (reporterkarnataka.com) :ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ. ಪಾಟೀಲ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕುಶಾಲಪ್ಪ ಎಂ.ಪಿ (ಸುಜಾ) ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2013-14ನೇ ಸಾಲಿನಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು 268.04 ಲಕ್ಷಗಳ ಅಂದಾಜು ವೆಚ್ಚದಲ್ಲಿ ಪ್ರಾರಂಭಿಸಲಾಯಿತು. ನಂತರ ಈ ಕಾಮಗಾರಿಯನ್ನು ರೂ 330.45 ಲಕ್ಷಗಳಲ್ಲಿ ಮುಗಿಸಲು ಆಡಳಿತಾತ್ಮಕ ಅನುಮೋದನೆಯನ್ನು ಮಡೆದುಕೊಂಡು 6 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ಈ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಸಿ.ಎಸ್.ಆರ್. ಅನುದಾನದಡಿಯಲ್ಲಿ ಕಾಮಗಾರಿಯನ್ನು ಮಾಡಲು ಕೊಡಗು ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಕೋರಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲೆಯ ಮಡಕೇರಿಯ ಅಧ್ಯಕ್ಷರು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಅವರು ಕಾಮಗಾರಿಯನ್ನು ಸಿಎಸ್.ಆರ್. ಅನುದಾನದಲ್ಲಿ ಕೈಗೊಂಡು ನಿರ್ವಹಣೆ ಮಾಡಲು ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದರಿ ಕಾಮಗಾರಿಯನ್ನು ಪಿ.ಪಿ.ಪಿ ಮಾದರಿಯಲ್ಲಿ ಪೂರ್ಣಗೊಳಿಸಿ ನಿರ್ವಹಣೆ ಹಾಗೂ ಕಾರ್ಯಚರಣೆ ಮಾಡುವ ಬಗ್ಗೆ ಮಾರ್ಗದರ್ಶನ ಕೋರಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು