9:26 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್

06/03/2025, 23:20

ಬೆಂಗಳೂರು (reporterkarnataka.com) :ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ. ಪಾಟೀಲ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕುಶಾಲಪ್ಪ ಎಂ.ಪಿ (ಸುಜಾ) ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2013-14ನೇ ಸಾಲಿನಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು 268.04 ಲಕ್ಷಗಳ ಅಂದಾಜು ವೆಚ್ಚದಲ್ಲಿ ಪ್ರಾರಂಭಿಸಲಾಯಿತು. ನಂತರ ಈ ಕಾಮಗಾರಿಯನ್ನು ರೂ 330.45 ಲಕ್ಷಗಳಲ್ಲಿ ಮುಗಿಸಲು ಆಡಳಿತಾತ್ಮಕ ಅನುಮೋದನೆಯನ್ನು ಮಡೆದುಕೊಂಡು 6 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ಈ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಸಿ.ಎಸ್.ಆರ್. ಅನುದಾನದಡಿಯಲ್ಲಿ ಕಾಮಗಾರಿಯನ್ನು ಮಾಡಲು ಕೊಡಗು ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಕೋರಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲೆಯ ಮಡಕೇರಿಯ ಅಧ್ಯಕ್ಷರು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಅವರು ಕಾಮಗಾರಿಯನ್ನು ಸಿಎಸ್.ಆರ್. ಅನುದಾನದಲ್ಲಿ ಕೈಗೊಂಡು ನಿರ್ವಹಣೆ ಮಾಡಲು ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದರಿ ಕಾಮಗಾರಿಯನ್ನು ಪಿ.ಪಿ.ಪಿ ಮಾದರಿಯಲ್ಲಿ ಪೂರ್ಣಗೊಳಿಸಿ ನಿರ್ವಹಣೆ ಹಾಗೂ ಕಾರ್ಯಚರಣೆ ಮಾಡುವ ಬಗ್ಗೆ ಮಾರ್ಗದರ್ಶನ ಕೋರಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು