1:53 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

BCC | ಬಳ್ಳಾರಿ ಪಾಲಿಕೆ ನೀರು ಸರಬರಾಜು ವಿಭಾಗದ ನೌಕರರ ಪ್ರತಿಭಟನೆ: ಬೇಡಿಕೆ ಈಡೇರಿಕೆಗೆ ಆಗ್ರಹ

07/03/2025, 12:04

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡುವ ವೃತ್ತಿಯಲ್ಲಿ ತೊಡಗಿರುವ ನೌಕರರನ್ನು ಪೌರ ಕಾರ್ಮಿಕರ ರೀತಿಯಲ್ಲೇ ‘ಡಿ’ ವೃಂದಕ್ಕೆ ಪರಿಗಣಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ‘ನೀರು ಸರಬರಾಜು ಮತ್ತು ದುರಸ್ತಿ ಕಾರ್ಮಿಕರ ಸಂಘ’ದ ಸದಸ್ಯರು ನಡೆಸುತ್ತಿರುವ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದ ಕಾರ್ಮಿಕರು ಮಂಗಳವಾರ 3ನೇ ದಿನವೂ ಮುಂದುವರಿಸಿದರು.
‘ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಸೇವೆ ಕಾಯಂ ಮಾಡಬೇಕು’ ಎಂದು ಘೋಷಣೆ ಕೂಗಿದರು.
ಪ್ರತಿಭಟನೆಗೆ ಬಿಜೆಪಿಯ ಕೆಲ ಕಾರ್ಪೊರೇಟರ್‌ಗಳು, ಸಾಮಾಜಿಕ ಹೋರಾಟಗಾರರು ಮತ್ತು ಸಂಘ–ಸಂಸ್ಥೆಯ ಮುಖಂಡರು ಬೆಂಬಲ ನೀಡಿದರು.
ಈ ವೇಳೆ ಮಾತನಾಡಿದ ಸಂಘದ ಪ್ರಮುಖರು, ‘ಆಯುಕ್ತರು ಭೇಟಿಯಾಗಿದ್ದರು. ನೇರ ನೇಮಕಾತಿ ಮಾಡಿಕೊಳ್ಳಬೆಕು. ನಮ್ಮ ಬೇಡಿಕೆ ಈಡೇರುವ ವರೆಗೆ ಪ್ರತಿಭಟನೆ ಮುಂದುವರಿಸುತ್ತೇವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು