11:29 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

BCC | ಬಳ್ಳಾರಿ ಪಾಲಿಕೆ ನೀರು ಸರಬರಾಜು ವಿಭಾಗದ ನೌಕರರ ಪ್ರತಿಭಟನೆ: ಬೇಡಿಕೆ ಈಡೇರಿಕೆಗೆ ಆಗ್ರಹ

07/03/2025, 12:04

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡುವ ವೃತ್ತಿಯಲ್ಲಿ ತೊಡಗಿರುವ ನೌಕರರನ್ನು ಪೌರ ಕಾರ್ಮಿಕರ ರೀತಿಯಲ್ಲೇ ‘ಡಿ’ ವೃಂದಕ್ಕೆ ಪರಿಗಣಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ‘ನೀರು ಸರಬರಾಜು ಮತ್ತು ದುರಸ್ತಿ ಕಾರ್ಮಿಕರ ಸಂಘ’ದ ಸದಸ್ಯರು ನಡೆಸುತ್ತಿರುವ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದ ಕಾರ್ಮಿಕರು ಮಂಗಳವಾರ 3ನೇ ದಿನವೂ ಮುಂದುವರಿಸಿದರು.
‘ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಸೇವೆ ಕಾಯಂ ಮಾಡಬೇಕು’ ಎಂದು ಘೋಷಣೆ ಕೂಗಿದರು.
ಪ್ರತಿಭಟನೆಗೆ ಬಿಜೆಪಿಯ ಕೆಲ ಕಾರ್ಪೊರೇಟರ್‌ಗಳು, ಸಾಮಾಜಿಕ ಹೋರಾಟಗಾರರು ಮತ್ತು ಸಂಘ–ಸಂಸ್ಥೆಯ ಮುಖಂಡರು ಬೆಂಬಲ ನೀಡಿದರು.
ಈ ವೇಳೆ ಮಾತನಾಡಿದ ಸಂಘದ ಪ್ರಮುಖರು, ‘ಆಯುಕ್ತರು ಭೇಟಿಯಾಗಿದ್ದರು. ನೇರ ನೇಮಕಾತಿ ಮಾಡಿಕೊಳ್ಳಬೆಕು. ನಮ್ಮ ಬೇಡಿಕೆ ಈಡೇರುವ ವರೆಗೆ ಪ್ರತಿಭಟನೆ ಮುಂದುವರಿಸುತ್ತೇವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು