12:16 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Karavali | ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿಯೇ ಸಿರಿ: ಲೇಖಕಿ ಭುವನೇಶ್ವರಿ ಹೆಗಡೆ

08/03/2025, 00:27

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿ ಪ್ರದೇಶದಲ್ಲಿ ಸತ್ಯ- ಧರ್ಮ – ನ್ಯಾಯಗಳ ಪ್ರಖರ ಪ್ರತಿಪಾದಕಿಯಾಗಿ ಸ್ತ್ರೀಯರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿದ ದೇವತೆಯೇ ಸಿರಿ. ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿ, ಇಲ್ಲಿಯ ನಂಬಿಕೆಯ ದೈವವಾದ’ಸಿರಿ’ಯೇ ಆಗಿದ್ದಾಳೆ ಎಂದು ಖ್ಯಾತ ಲೇಖಕಿ ಭುವನೇಶ್ವರಿ ಹೆಗಡೆ ಹೇಳಿದರು.


ನಗರದ ನ್ಯಾಯಾಲಯದ ಆವರಣದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಹಾಗೂ ನ್ಯಾಯಾಲಯದ ಉದ್ಯೋಗಿಗಳ ಸಂಘಗಳು ಜಂಟಿಯಾಗಿ ಏರ್ಪಡಿಸಿದ್ದ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ದ.ಕ. ಜಿಲ್ಲಾ ಮತ್ತು ಸೆಷನ್ ಹೆಚ್ಚುವರಿ ನ್ಯಾಯಾಧೀಶರಾದ ಪ್ರೀತಿ. ಕೆ.ಪಿ. ಅವರು ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಹೋರಾಟದ ಹಿನ್ನೆಲೆಯನ್ನು ವಿವರಿಸಿ ಅದಕ್ಕಾಗಿ ಹೋರಾಡಿದ ಮಹಿಳೆಯರನ್ನು ಸ್ಮರಿಸಿದರು.

ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿ, ದಕ್ಷಿಣ ಕನ್ನಡ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕ್ ಅವರು ಇಂದಿನ ಸುಶಿಕ್ಷಿತ ಮಹಿಳೆಯರ ಎದುರು ಅನೇಕ ಸವಾಲುಗಳಿವೆ. ತಮ್ಮ ಆತ್ಮವಿಶ್ವಾಸದಿಂದ ಅವುಗಳನ್ನು ಎದುರಿಸುವ ಛಲ ಹೊಂದಬೇಕು ಎಂದರು.



ವಿವಿಧ ವಿಭಾಗಗಳ ಹಿರಿಯ ನ್ಯಾಯಾಧೀಶರುಗಳು, ಹಿರಿಕಿರಿಯ ವಕೀಲೆಯರು, ಸಿಬ್ಬಂದಿಗಳು ಹಾಜರಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ಅವರು ವಹಿಸಿದ್ದರು. ರಶ್ಮಿ ವಂದಿಸಿದರು.ವಕೀಲ ಸಾಧಕಿಯರನ್ನು ಸನ್ಮಾನಿಸಲಾಯಿತು.
ಕೊನೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು