8:19 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಸುರಕ್ಷಿತವಾಗಿ ಪತ್ತೆ: ಉಡುಪಿಯಲ್ಲಿ ಪ್ರತ್ಯಕ್ಷ

08/03/2025, 17:18

ಬಂಟ್ವಾಳ(reporterkarnataka.com):ಫೆ.25 ರಂದು ಮನೆಯ ಹತ್ತಿರದ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿಬರುತ್ತೇನೆಂದು ಹೇಳಿ ಹೋಗಿದ್ದ ಪಿಯು ವಿದ್ಯಾರ್ಥಿ ದಿಗಂತ್ ಕ್ಷೇಮವಾಗಿ ಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ.
ಆತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಾಣೆಯಾದ ದಿನದಂದು ಆತನ ಚಪ್ಪಲಿ, ಮೊಬೈಲ್ ಪತ್ತೆಯಾದ ಬಳಿಕ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ಫರಂಗಿಪೇಟೆಯಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದು ಶೀಘ್ರವಾಗಿ ಪತ್ತೆ ಹಚ್ಚುವಂತೆ ಒತ್ತಾಯಿಸಲಾಗಿತ್ತು. ವಿಶ್ವ ಹಿಂದು ಪರಿಷತ್, ವಿದ್ಯಾರ್ಥಿ ಪರಿಷತ್ ಸೇರಿದಂತೆ ಹಲವು ಸಂಘಟನೆಗಳು ಕಳೆದ ಹನ್ನೆರಡು ದಿನಗಳಿಂದ ವಿದ್ಯಾರ್ಥಿ ಕಾಣೆಯಾಗಿರುವುದನ್ನು ಪತ್ತೆ ಮಾಡದಿರುವ ಪೊಲೀಸ್ ಇಲಾಖೆಯ ಬಗ್ಗೆ ಆರೋಪ ಮಾಡಿದ್ದು ಮಾ.10 ರ ಒಳಗೆ ಪತ್ತೆಯಾಗದಿದ್ದಲ್ಲಿ ರಾಜ್ಯ ವ್ಯಾಪಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದವು.
ಪಕ್ಕದ ಉಡುಪಿಯಲ್ಲಿ ಬಾಲಕ ಪತ್ತೆಯಾಗಿದ್ದು , ಪೊಲೀಸರು ಕರೆತರುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು