9:38 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

Student Missing | ಪರೀಕ್ಷಾ ಭಯದಿಂದ ಊರು ಬಿಟ್ಟ ಪಿಯು ವಿದ್ಯಾರ್ಥಿ : ರಾಜ್ಯ ಸುತ್ತಾಡಿ ಉಡುಪಿಗೆ ಬಂದು ಸಿಕ್ಕಿಬಿದ್ದ ಫರಂಗಿಪೇಟೆ ದಿಗಂತ್ !

09/03/2025, 16:23

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸಂಶಯಾಸ್ಪದವಾಗಿ ಕಾಣೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್ ಉಡುಪಿಯಲ್ಲಿ ಸಾರ್ವಜನಿಕರಿಗೆ ಸಿಕ್ಕಿದ್ದು, ಪೊಲೀಸರು ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಪೊಲೀಸರ ನಿದ್ದೆಗೆಡಿಸಿದ್ದ ಈ ಪ್ರಕರಣದಿಂದ ನಿಟ್ಟುಸಿರು ಬಿಡುವಂತಾಗಿದೆ. ಹೆತ್ತವರು ಮಗ ಮರಳಿ ಮನೆಗೆ ಬಂದ ಸಂತಸದಲ್ಲಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಓದುತಿದ್ದ ದಿಗಂತ್ ಪರೀಕ್ಷೆಗೆ ಹಾಜರಾಗುವ ಹಾಲ್ ಟಿಕೆಟ್ ಪಡೆದು ಬಳಿಕ ನಿಗೂಢವಾಗಿ ಕಾಣೆಯಾಗಿರುವುದು ಹಲವು ಗೊಂದಲಗಳಿಗೆ ಕಾರಣವಾಗಿತ್ತು. ಪತ್ತೆ ಕಾರ್ಯಕ್ಕೆ ಯಾವುದೇ ಕುರುಹು ಸಿಗಲಿಲ್ಲ. ಈ ಬಗ್ಗೆ ಸಾರ್ಜನಿಕರು ಆತಂಕಕ್ಕೆ ಒಳಗಾಗಿದ್ದು ಮಾತ್ರವಲ್ಲ ವಿಧಾನ ಸಭೆ ಕಲಾಪದಲ್ಲಿ ಜಿಲ್ಲೆಯ ಶಾಸಕರು ಮಾತ್ರವಲ್ಲದೆ ಸಭಾಧ್ಯಕ್ಷರು ಸಹಿತ ಅನೇಕರು ತನಿಖೆ ಶೀಘ್ರವಾಗಿ ಚುರುಕುಗೊಳಿಸುವಂತೆ ಸರಕಾರಕ್ಕೆ ಆಗ್ರಹಿಸಲಾಗಿತ್ತು.
*ಪೊಲೀಸರಿಂದ ವಿಚಾರಣೆ:* ಪೊಲೀಸರ ಮುಂದೆ ಸತ್ಯವನ್ನೇ ಹೇಳುತ್ತೇನೆ ಎಂದು‌‌ ಎಲ್ಲವನ್ನೂ ಇದೀಗ ಬಾಯಿ ಬಿಟ್ಟಿದ್ದಾನೆ ದಿಗಂತ್.
ಕಾಣೆಯಾದ ದಿನವೇ ಫೆ.25ರಂದು ಊರು ಬಿಟ್ಟು ಮೈಸೂರು ಸೇರಿದ.ಅಲ್ಲಿಂದ ಬೆಂಗಳೂರು ತೆರಳಿ ಒಂದೆರಡು ದಿನ ತಿರುಗಾಡಿದ್ದಾನೆ.ಬಳಿಕ ರೆಸಾರ್ಟ್ ಒಂದರಲ್ಲಿ ಕೆಲಸಕ್ಕೂ ಸೇರಿದ್ದು ಮೂರು ದಿನ ಬಳಿಕ ಹಣ ಪಡೆದು‌ ಅಲ್ಲಿಂದ ಶಿವಮೊಗ್ಗಕ್ಕೆ ತೆರಳಿ ಮತ್ತೆ ಮೈಸೂರಿಗೆ ವಾಪಾಸ್ ಹೋಗಿದ್ದಾನೆ. ಮೈಸೂರಿನಿಂದ ಮತ್ತೆ ಮುರುಡೇಶ್ವರ ಹೋಗುವ ರೈಲು ಹತ್ತಿ ಉಡುಪಿಯಲ್ಲಿ ಇಳಿದಿದ್ದಾನೆ. ಉಡುಪಿಯಲ್ಲಿ ಅತ್ತಿತ್ತ ನೋಡಿ ಡಿಮಾರ್ಟ್ ಗೆ ಪ್ರವೇಶಿಸಿದ್ದಾನೆ. ಅಲ್ಲಿ ತಿರುಗಾಡುತ್ತಿದ್ದ ಈತನನ್ನು ಕಂಡು ಸಂಶಯಗೊಂಡು ವಿಚಾರಣೆ ನಡೆಸಿ ಕಾಣೆಯಾದ ದಿಗಂತ್ ಈತನೇ ಎಂದು ಖಚಿತಪಡಿಸಿಕೊಂಡು ಮಾಹಿತಿ ನೀಡಿದ್ದಾರೆ. ಅಲ್ಲಿನ ಮೇನೇಜರ್ ಈತನ ತಾಯಿಯ ನಂಬರ್ ಪಡೆದು ದಿಗಂತ್ ನಲ್ಲಿ ಮಾತನಾಡಿಸಿದ್ದಾರೆ. ಬಳಿಕ ಪೊಲೀಸರು ಮನೆಯವರಿಗೆ ಒಪ್ಪಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯವನ್ನು ಹೊರಗೆಡಹಿದ್ದಾನೆ.
ಯಾಕೆ ಹೀಗೆ ಮಾಡಿದೆ ಮಾರಾಯ? ಎಂದು ಕೇಳಿದರೆ ಮೊನ್ನೆ ನಡೆದ ಪರೀಕ್ಷೆಯಲ್ಲಿ‌ಅಂಕ ಕಡಿಮೆ ಬಂದಿತ್ತು.ಹಾಗಾಗಿ‌ ಫೈನಲ್ ಪರೀಕ್ಷೆ ಬರೆಯುವುದು ಕಷ್ಟವಾದೀತು‌ ಎಂಬ ಭಯ ದಿಂದ ಹೀಗೆ ಮಾಡಿದೆ ಎಂದು ತನ್ನ ಅಸಹಾಯಕತೆಯನ್ನು ಹೇಳಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು