1:02 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

Student Missing | ಪರೀಕ್ಷಾ ಭಯದಿಂದ ಊರು ಬಿಟ್ಟ ಪಿಯು ವಿದ್ಯಾರ್ಥಿ : ರಾಜ್ಯ ಸುತ್ತಾಡಿ ಉಡುಪಿಗೆ ಬಂದು ಸಿಕ್ಕಿಬಿದ್ದ ಫರಂಗಿಪೇಟೆ ದಿಗಂತ್ !

09/03/2025, 16:23

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸಂಶಯಾಸ್ಪದವಾಗಿ ಕಾಣೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್ ಉಡುಪಿಯಲ್ಲಿ ಸಾರ್ವಜನಿಕರಿಗೆ ಸಿಕ್ಕಿದ್ದು, ಪೊಲೀಸರು ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಪೊಲೀಸರ ನಿದ್ದೆಗೆಡಿಸಿದ್ದ ಈ ಪ್ರಕರಣದಿಂದ ನಿಟ್ಟುಸಿರು ಬಿಡುವಂತಾಗಿದೆ. ಹೆತ್ತವರು ಮಗ ಮರಳಿ ಮನೆಗೆ ಬಂದ ಸಂತಸದಲ್ಲಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಓದುತಿದ್ದ ದಿಗಂತ್ ಪರೀಕ್ಷೆಗೆ ಹಾಜರಾಗುವ ಹಾಲ್ ಟಿಕೆಟ್ ಪಡೆದು ಬಳಿಕ ನಿಗೂಢವಾಗಿ ಕಾಣೆಯಾಗಿರುವುದು ಹಲವು ಗೊಂದಲಗಳಿಗೆ ಕಾರಣವಾಗಿತ್ತು. ಪತ್ತೆ ಕಾರ್ಯಕ್ಕೆ ಯಾವುದೇ ಕುರುಹು ಸಿಗಲಿಲ್ಲ. ಈ ಬಗ್ಗೆ ಸಾರ್ಜನಿಕರು ಆತಂಕಕ್ಕೆ ಒಳಗಾಗಿದ್ದು ಮಾತ್ರವಲ್ಲ ವಿಧಾನ ಸಭೆ ಕಲಾಪದಲ್ಲಿ ಜಿಲ್ಲೆಯ ಶಾಸಕರು ಮಾತ್ರವಲ್ಲದೆ ಸಭಾಧ್ಯಕ್ಷರು ಸಹಿತ ಅನೇಕರು ತನಿಖೆ ಶೀಘ್ರವಾಗಿ ಚುರುಕುಗೊಳಿಸುವಂತೆ ಸರಕಾರಕ್ಕೆ ಆಗ್ರಹಿಸಲಾಗಿತ್ತು.
*ಪೊಲೀಸರಿಂದ ವಿಚಾರಣೆ:* ಪೊಲೀಸರ ಮುಂದೆ ಸತ್ಯವನ್ನೇ ಹೇಳುತ್ತೇನೆ ಎಂದು‌‌ ಎಲ್ಲವನ್ನೂ ಇದೀಗ ಬಾಯಿ ಬಿಟ್ಟಿದ್ದಾನೆ ದಿಗಂತ್.
ಕಾಣೆಯಾದ ದಿನವೇ ಫೆ.25ರಂದು ಊರು ಬಿಟ್ಟು ಮೈಸೂರು ಸೇರಿದ.ಅಲ್ಲಿಂದ ಬೆಂಗಳೂರು ತೆರಳಿ ಒಂದೆರಡು ದಿನ ತಿರುಗಾಡಿದ್ದಾನೆ.ಬಳಿಕ ರೆಸಾರ್ಟ್ ಒಂದರಲ್ಲಿ ಕೆಲಸಕ್ಕೂ ಸೇರಿದ್ದು ಮೂರು ದಿನ ಬಳಿಕ ಹಣ ಪಡೆದು‌ ಅಲ್ಲಿಂದ ಶಿವಮೊಗ್ಗಕ್ಕೆ ತೆರಳಿ ಮತ್ತೆ ಮೈಸೂರಿಗೆ ವಾಪಾಸ್ ಹೋಗಿದ್ದಾನೆ. ಮೈಸೂರಿನಿಂದ ಮತ್ತೆ ಮುರುಡೇಶ್ವರ ಹೋಗುವ ರೈಲು ಹತ್ತಿ ಉಡುಪಿಯಲ್ಲಿ ಇಳಿದಿದ್ದಾನೆ. ಉಡುಪಿಯಲ್ಲಿ ಅತ್ತಿತ್ತ ನೋಡಿ ಡಿಮಾರ್ಟ್ ಗೆ ಪ್ರವೇಶಿಸಿದ್ದಾನೆ. ಅಲ್ಲಿ ತಿರುಗಾಡುತ್ತಿದ್ದ ಈತನನ್ನು ಕಂಡು ಸಂಶಯಗೊಂಡು ವಿಚಾರಣೆ ನಡೆಸಿ ಕಾಣೆಯಾದ ದಿಗಂತ್ ಈತನೇ ಎಂದು ಖಚಿತಪಡಿಸಿಕೊಂಡು ಮಾಹಿತಿ ನೀಡಿದ್ದಾರೆ. ಅಲ್ಲಿನ ಮೇನೇಜರ್ ಈತನ ತಾಯಿಯ ನಂಬರ್ ಪಡೆದು ದಿಗಂತ್ ನಲ್ಲಿ ಮಾತನಾಡಿಸಿದ್ದಾರೆ. ಬಳಿಕ ಪೊಲೀಸರು ಮನೆಯವರಿಗೆ ಒಪ್ಪಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯವನ್ನು ಹೊರಗೆಡಹಿದ್ದಾನೆ.
ಯಾಕೆ ಹೀಗೆ ಮಾಡಿದೆ ಮಾರಾಯ? ಎಂದು ಕೇಳಿದರೆ ಮೊನ್ನೆ ನಡೆದ ಪರೀಕ್ಷೆಯಲ್ಲಿ‌ಅಂಕ ಕಡಿಮೆ ಬಂದಿತ್ತು.ಹಾಗಾಗಿ‌ ಫೈನಲ್ ಪರೀಕ್ಷೆ ಬರೆಯುವುದು ಕಷ್ಟವಾದೀತು‌ ಎಂಬ ಭಯ ದಿಂದ ಹೀಗೆ ಮಾಡಿದೆ ಎಂದು ತನ್ನ ಅಸಹಾಯಕತೆಯನ್ನು ಹೇಳಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು