2:13 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್

11/03/2025, 11:01

ಬೆಂಗಳೂರು(reporterkarnataka.com):ರಾಜ್ಯದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಹೆಚ್ಚಿಸಲು ಆದ್ಯತೆ ನೀಡಲಾಗಿದೆ, ಬಹಳಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 18 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿರುತ್ತವೆ. 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸಲಾಗಿದೆ. 2 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಾದ ಅರಸೀಕೆರೆ ಮತ್ತು ದೇವದುರ್ಗ ಕಾಲೇಜುಗಳ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಪ್ರಸ್ತುತ ರಾಜ್ಯದಲ್ಲಿ 16 ಸರ್ಕಾರಿ, 8 ಖಾಸಗಿ ಅನುದಾನಿತ 138 ಖಾಸಗಿ ಅನುದಾನ ರಹಿತ ಹಾಗೂ 16 ಅಲ್ಪಸಂಖ್ಯಾತ ಖಾಸಗಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಿವೆ. 18 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಕಳೆದ 5 ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರೂ. 33159.23 ಲಕ್ಷಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಸರ್ಕಾರಿ ಕಾಲೇಜುಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಯಾವುದೇ ಕಟ್ಟಡವನ್ನು ಕಟ್ಟುವಂತಹ ಯೋಜನೆ ಇರುವುದಿಲ್ಲ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯವರಿಗೆ ವೇತನ ಹಾಗೂ ಇನ್ನಿತರ ಭತ್ಯೆಗಳನ್ನು ಖಜಾನೆ–2 ತಂತ್ರಾಂಶದ ಮೂಲಕ ಪಾವತಿಸಲಾಗುತ್ತದೆ. ಸದರಿ ಕಾಲೇಜುಗಳ ಸಿಬ್ಬಂದಿ ವೇತನ, ಕಾಲೇಜುಗಳಿಗೆ ಸಾಮಾನ್ಯ ವೆಚ್ಚ, ಕಟ್ಟಡ ವೆಚ್ಚ, ಸಾರಿಗೆ ವೆಚ್ಚ, ನಿರ್ವಹಣಾ ವೆಚ್ಚ, ಸಾಮಗ್ರಿ ಹಾಗೂ ಅತಿಥಿ ಉಪನ್ಯಾಸಕರ ಗೌರವಧನ ಪಾವತಿಸಲು ಒಟ್ಟಾರೆ ಪ್ರಸ್ತುತ ಸಾಲಿನಲ್ಲಿ ರೂ. 8526.46 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಈ ಬಾರಿ ಆಯವ್ಯಯದಲ್ಲಿ 2000 ಬೋಧಕ ಸಿಬ್ಬಂದಿಗಳನ್ನು ತುಂಬಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು