4:45 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹೆಚ್ಚುತ್ತಿರುವ ಕಳ್ಳತನ, ಲೂಟಿ ಪ್ರಕರಣ; ಪೊಲೀಸ್ ಇಲಾಖೆ, ತಹಶೀಲ್ದಾರ್ ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

11/03/2025, 23:11

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳ್ಳತನ, ಲೂಟಿ, ದರೋಡೆ ಹೆಚ್ಚುತ್ತಿದ್ದು, ಜನರು ಭಯಭೀತಿಗೊಂಡಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಲಾಯಿತು.
ಕಳೆದ ಎರಡು ತಿಂಗಳಿಂದ ಚಳ್ಳಕೆರೆ ತಾಲೂಕಿನಲ್ಲಿ ಸರಣಿ ಕಳ್ಳತನ ಹೆಚ್ಚಾಗಿದ್ದು. ಹಳ್ಳಿಯಿಂದ ಚಳ್ಳಕೆರೆಗೆ ಬರುವ ಬ್ಯಾಂಕಿನಲ್ಲಿ ವ್ಯವಹರಿಸುವ ಜನರಲ್ಲಿ ಆತಂಕ ಉಂಟು ಮಾಡಿದೆ. ಕಳೆದ ಎರಡು ತಿಂಗಳಿಂದ ವಾಸವಿ ಮಹಲ್ ಹತ್ತಿರ, ಶಾಂತಿನಗರ,vವಾಸವಿ ಕಾಲೋನಿ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ, ಸಚಿವ ಸುಧಾಕರ್ ರವರ ಮನೆಯ ಹತ್ತಿರ ಹೀಗೆ
ಚೈನ್ ಕಳ್ಳತನ, ಮೊಬೈಲ್ ಕಳೆತನ, ಬೈಕ್ ಕಳ್ಳತನ, ಬ್ಯಾಂಕ್ ಇಂದ ಡ್ರಾ ಮಾಡಿಕೊಂಡು ಬಂದಿರುವ ಹಣ ಲೂಟಿ ಮಾಡುವುದು, ಒಂಟಿ ಮಹಿಳೆ ವಾಸಿಸುವ ಇರುವ ಮನೆಗೆ ನುಗ್ಗಿ ಚಿನ್ನಾಭರಣ ಕಳವು ನಡೆದಿದೆ.

ಇದುವರೆಗೂ ಕಳ್ಳರ ಸುಳಿವು ಸಿಕ್ಕಿಲ್ಲ. ಆದಷ್ಟು ಬೇಗ ಪೊಲೀಸ್ ಇಲಾಖೆಯು ಈ ಐನಾತಿ ಕಳ್ಳರನ್ನು ಹಿಡಿದು ಬಂಧಿಸಬೇಕು. ಚಳ್ಳಕೆರೆಯ ಜನರಲ್ಲಿ ಭಯದ ವಾತಾವರಣವನ್ನು ಮುಕ್ತಗೊಳಿಸಿ ನಿರಳತೆಯನ್ನು ಉಂಟುಮಾಡಲಿ ಎಂದು ಚಳ್ಳಕೆರೆಯ ತಹಶೀಲ್ದಾರ್ ಹಾಗೂ ಡಿವೈಎಸ್ಪಿ ರಾಜಣ್ಣ ಅವರಿಗೆ ಕರ್ನಾಟಕ ಯುವರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಿದೆ.
ಚಳ್ಳಕೆರೆ ತಾಲ್ಲೂಕು ಘಟಕದ ಕರ್ನಾಟಕ ಯುವರಕ್ಷಣಾ ವೇದಿಕೆಯ ಅಧ್ಯಕ್ಷರಾದ ಮೈಲಾರಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ. ನಗರ ಉಪಾಧ್ಯಕ್ಷರಾದ ಜಯಣ್ಣ. ತಾಲೂಕ ಕಾರ್ಯಧ್ಯಕ್ಷರಾದ ಶಿವಪುತ್ರ. ಕಾರ್ಯದರ್ಶಿಯಾದ ಗೌಡ ಯಾದವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು