1:53 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹೆಚ್ಚುತ್ತಿರುವ ಕಳ್ಳತನ, ಲೂಟಿ ಪ್ರಕರಣ; ಪೊಲೀಸ್ ಇಲಾಖೆ, ತಹಶೀಲ್ದಾರ್ ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

11/03/2025, 23:11

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳ್ಳತನ, ಲೂಟಿ, ದರೋಡೆ ಹೆಚ್ಚುತ್ತಿದ್ದು, ಜನರು ಭಯಭೀತಿಗೊಂಡಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಲಾಯಿತು.
ಕಳೆದ ಎರಡು ತಿಂಗಳಿಂದ ಚಳ್ಳಕೆರೆ ತಾಲೂಕಿನಲ್ಲಿ ಸರಣಿ ಕಳ್ಳತನ ಹೆಚ್ಚಾಗಿದ್ದು. ಹಳ್ಳಿಯಿಂದ ಚಳ್ಳಕೆರೆಗೆ ಬರುವ ಬ್ಯಾಂಕಿನಲ್ಲಿ ವ್ಯವಹರಿಸುವ ಜನರಲ್ಲಿ ಆತಂಕ ಉಂಟು ಮಾಡಿದೆ. ಕಳೆದ ಎರಡು ತಿಂಗಳಿಂದ ವಾಸವಿ ಮಹಲ್ ಹತ್ತಿರ, ಶಾಂತಿನಗರ,vವಾಸವಿ ಕಾಲೋನಿ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ, ಸಚಿವ ಸುಧಾಕರ್ ರವರ ಮನೆಯ ಹತ್ತಿರ ಹೀಗೆ
ಚೈನ್ ಕಳ್ಳತನ, ಮೊಬೈಲ್ ಕಳೆತನ, ಬೈಕ್ ಕಳ್ಳತನ, ಬ್ಯಾಂಕ್ ಇಂದ ಡ್ರಾ ಮಾಡಿಕೊಂಡು ಬಂದಿರುವ ಹಣ ಲೂಟಿ ಮಾಡುವುದು, ಒಂಟಿ ಮಹಿಳೆ ವಾಸಿಸುವ ಇರುವ ಮನೆಗೆ ನುಗ್ಗಿ ಚಿನ್ನಾಭರಣ ಕಳವು ನಡೆದಿದೆ.

ಇದುವರೆಗೂ ಕಳ್ಳರ ಸುಳಿವು ಸಿಕ್ಕಿಲ್ಲ. ಆದಷ್ಟು ಬೇಗ ಪೊಲೀಸ್ ಇಲಾಖೆಯು ಈ ಐನಾತಿ ಕಳ್ಳರನ್ನು ಹಿಡಿದು ಬಂಧಿಸಬೇಕು. ಚಳ್ಳಕೆರೆಯ ಜನರಲ್ಲಿ ಭಯದ ವಾತಾವರಣವನ್ನು ಮುಕ್ತಗೊಳಿಸಿ ನಿರಳತೆಯನ್ನು ಉಂಟುಮಾಡಲಿ ಎಂದು ಚಳ್ಳಕೆರೆಯ ತಹಶೀಲ್ದಾರ್ ಹಾಗೂ ಡಿವೈಎಸ್ಪಿ ರಾಜಣ್ಣ ಅವರಿಗೆ ಕರ್ನಾಟಕ ಯುವರಕ್ಷಣಾ ವೇದಿಕೆ ಪರವಾಗಿ ಮನವಿ ಸಲ್ಲಿಸಿದೆ.
ಚಳ್ಳಕೆರೆ ತಾಲ್ಲೂಕು ಘಟಕದ ಕರ್ನಾಟಕ ಯುವರಕ್ಷಣಾ ವೇದಿಕೆಯ ಅಧ್ಯಕ್ಷರಾದ ಮೈಲಾರಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ. ನಗರ ಉಪಾಧ್ಯಕ್ಷರಾದ ಜಯಣ್ಣ. ತಾಲೂಕ ಕಾರ್ಯಧ್ಯಕ್ಷರಾದ ಶಿವಪುತ್ರ. ಕಾರ್ಯದರ್ಶಿಯಾದ ಗೌಡ ಯಾದವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು