2:01 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್

12/03/2025, 21:47

ಬೆಂಗಳೂರು (reporterkarnataka.com) : ಮಹಿಳಾ ಸಬಲೀಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ತ್ರೀ ಶಕ್ತಿ, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಮಹಿಳಾ ಸಹಾಯವಾಣಿ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಇಂದು ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಿವಮೊಗ್ಗ ವಿಧಾನಸಭಾ ಸದಸ್ಯ ಚನ್ನಬಸಪ್ಪ ಇವರ ಪ್ರಶ್ನೆಗೆ ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ, ಮಾಜಿ ದೇವದಾಸಿ ಮಹಿಳೆ ಪುನರ್ವಸತಿ ಯೋಜನೆ, ಮಾಜಿ ದೇವದಾಸಿಯರಿಗೆ ವಸತಿ ನಿರ್ಮಾಣ ಯೋಜನೆ, ಬಡ್ಡಿ ಸಹಾಯಧನ ಯೋಜನೆ, ಮಹಿಳಾ ತರಬೇತಿ ಯೋಜನೆ, ವೃದ್ಧಿ ಯೋಜನೆ, ಕಿರುಸಾಲ ಯೋಜನೆ, ಮಹಿಳೆಯರಿಗೆ ಬಡ್ಡಿ ಸಹಾಯಧನ ಯೋಜನೆ, ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸಾಲ ಸೌಲಭ್ಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಕ್ಕಳ ಹಕ್ಕು ರಕ್ಷಣೆ ಮಾಡುವಲ್ಲಿ ಪ್ರಸ್ತುತ ರಾಜ್ಯದಲ್ಲಿ 32 ಸರ್ಕಾರಿ ಬಾಲಕರ ಬಾಲಮಂದಿರ, 30ಸರ್ಕಾರಿ ಬಾಲಕಿಯರ ಬಾಲಮಂದಿರ, 0-6 ವರ್ಷದೊಳಗಿನ ಮಕ್ಕಳಿಗೆ 1 ಶಿಶುಮಂದಿರ, 4 ಬುದ್ದಿಮಾಂದ್ಯ ಮಕ್ಕಳ ಬಾಲಮಂದಿರ ಹಾಗೂ ಬಾಲಕರಿಗಾಗಿ 16 ವೀಕ್ಷಣಾಲಯ ಮತ್ತು ಬಾಲಕಿಯರಿಗಾಗಿ 1 ವೀಕ್ಷಣಾಲಯ 21 ಸರ್ಕಾರಿ ವಿಶೇಷ ದತ್ತು ಸಂಸ್ಥೆಗಳು, 23 ಸರ್ಕಾರೇತರ ವಿಶೇಷ ದತ್ತು ಸಂಸ್ಥೆಗಳು, 29 ತೆರೆದ ತಂಗುದಾಣಗಳು, 32 ನಿರ್ಗತಿಕ ಮಕ್ಕಳ ಕುಟೀರ, 5 ಅರ್ಹ ಸಂಸ್ಥೆ ಮತ್ತು 7 ಅನುಪಾಲನಾ ಗೃಹಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಕಾರ್ಮಿಕ ಸಚಿವರು ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು