10:17 AM Wednesday18 - June 2025
ಬ್ರೇಕಿಂಗ್ ನ್ಯೂಸ್
Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್…

ಇತ್ತೀಚಿನ ಸುದ್ದಿ

ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್

12/03/2025, 21:47

ಬೆಂಗಳೂರು (reporterkarnataka.com) : ಮಹಿಳಾ ಸಬಲೀಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ತ್ರೀ ಶಕ್ತಿ, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಮಹಿಳಾ ಸಹಾಯವಾಣಿ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಇಂದು ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಿವಮೊಗ್ಗ ವಿಧಾನಸಭಾ ಸದಸ್ಯ ಚನ್ನಬಸಪ್ಪ ಇವರ ಪ್ರಶ್ನೆಗೆ ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ, ಮಾಜಿ ದೇವದಾಸಿ ಮಹಿಳೆ ಪುನರ್ವಸತಿ ಯೋಜನೆ, ಮಾಜಿ ದೇವದಾಸಿಯರಿಗೆ ವಸತಿ ನಿರ್ಮಾಣ ಯೋಜನೆ, ಬಡ್ಡಿ ಸಹಾಯಧನ ಯೋಜನೆ, ಮಹಿಳಾ ತರಬೇತಿ ಯೋಜನೆ, ವೃದ್ಧಿ ಯೋಜನೆ, ಕಿರುಸಾಲ ಯೋಜನೆ, ಮಹಿಳೆಯರಿಗೆ ಬಡ್ಡಿ ಸಹಾಯಧನ ಯೋಜನೆ, ಆ್ಯಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸಾಲ ಸೌಲಭ್ಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಕ್ಕಳ ಹಕ್ಕು ರಕ್ಷಣೆ ಮಾಡುವಲ್ಲಿ ಪ್ರಸ್ತುತ ರಾಜ್ಯದಲ್ಲಿ 32 ಸರ್ಕಾರಿ ಬಾಲಕರ ಬಾಲಮಂದಿರ, 30ಸರ್ಕಾರಿ ಬಾಲಕಿಯರ ಬಾಲಮಂದಿರ, 0-6 ವರ್ಷದೊಳಗಿನ ಮಕ್ಕಳಿಗೆ 1 ಶಿಶುಮಂದಿರ, 4 ಬುದ್ದಿಮಾಂದ್ಯ ಮಕ್ಕಳ ಬಾಲಮಂದಿರ ಹಾಗೂ ಬಾಲಕರಿಗಾಗಿ 16 ವೀಕ್ಷಣಾಲಯ ಮತ್ತು ಬಾಲಕಿಯರಿಗಾಗಿ 1 ವೀಕ್ಷಣಾಲಯ 21 ಸರ್ಕಾರಿ ವಿಶೇಷ ದತ್ತು ಸಂಸ್ಥೆಗಳು, 23 ಸರ್ಕಾರೇತರ ವಿಶೇಷ ದತ್ತು ಸಂಸ್ಥೆಗಳು, 29 ತೆರೆದ ತಂಗುದಾಣಗಳು, 32 ನಿರ್ಗತಿಕ ಮಕ್ಕಳ ಕುಟೀರ, 5 ಅರ್ಹ ಸಂಸ್ಥೆ ಮತ್ತು 7 ಅನುಪಾಲನಾ ಗೃಹಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಕಾರ್ಮಿಕ ಸಚಿವರು ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು