2:15 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆಎಎಸ್ ಮರು ಪರೀಕ್ಷೆ ಕೋರ್ಟ್ ಆದೇಶದ ಮೇಲೆ ಅವಲಂಬಿತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/03/2025, 23:48

ಬೆಂಗಳೂರು(reporterkarnataka.com):ಕೆಎಎಸ್ ಮರುಪರೀಕ್ಷೆ ಕೆಎಟಿ ಆದೇಶದ ಮೇಲೆ ಅವಲಂಭಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಹೇಳಿದರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ವಿಪಕ್ಷಗಳ ನಾಯಕರು ಹಾಗೂ ಸದಸ್ಯರು ಕೆಎಎಸ್ ಪ್ರಶ್ನೆಪತ್ರಿಕೆಗಳ ಅನುವಾದಲ್ಲಿ ಉಂಟಾದ ಲೋಪದೋಷಗಳು, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವಲ್ಲಿನ ವಿಳಂಬ ನೀತಿ ಕುರಿತಂತೆ ಕೇಳಲಾದ ಪ್ರಶ್ನೆಗಳಿಗೆ ಸುದೀರ್ಘವಾಗಿ ಉತ್ತರಿಸಿದ ಮುಖ್ಯಮಂತ್ರಿಗಳು, ಕೆಎಎಸ್ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರ ಲೋಪದೋಷ ಮರುಪರೀಕ್ಷೆಯಲ್ಲೂ ಕಂಡುಬಂದಿದ್ದು, ಅದನ್ನು ಅಭ್ಯರ್ಥಿಗಳು ಕೆಎಟಿ ಯಲ್ಲಿ ಪ್ರಶ್ನಿಸಿದ್ದಾರೆ. ಮರುಪರೀಕ್ಷೆ ಮಾಡಬೇಕೇ ಅಥವಾ ತರ್ಜುಮೆ ತಪ್ಪಾಗಿರುವ ಪ್ರಶ್ನೆಗಳಿಗೆ ಕೃಪಾಂಕ ನೀಡಬೇಕೆ ಎಂಬುದರ ಕುರಿತು ನ್ಯಾಯಾಲಯ ತೀರ್ಮಾನಿಸಬೇಕಾಗಿದೆ ಎಂದರು.
ಕೆಪಿಎಸ್ ಸಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಅದಕ್ಕೆ ಸಲಹೆ ಸೂಚನೆಗಳನ್ನು ನೀಡಬಹುದೇ ಹೊರತು ನೇರವಾಗಿ ಆದೇಶ ಮಾಡಲು ಸರ್ಕಾರಕ್ಕೆ ಅವಕಾಶ ಇರುವುದಿಲ್ಲ. ತರ್ಜುಮೆಯಲ್ಲಿನ ಲೋಪದೋಷಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಗ್ರಾಮೀಣ ಭಾಗದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವುದನ್ನು ತಡೆಗಟ್ಟಲು ಸರಕಾರವು, ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲಿ ಸಿದ್ದಪಡಿಸಿ ನಂತರ ಆಂಗ್ಲಭಾಷೆಗೆ ತರ್ಜುಮೆ ಮಾಡುವಂತೆ ಕೆಪಿಎಸ್ ಸಿ ಗೆ ಸೂಚಿಸಿದೆ. ಜೊತೆಗೆ ಪ್ರಶ್ನೆಪತ್ರಿಕೆಯನ್ನು ತಪ್ಪಾಗಿ ಭಾಷಾಂತರ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಹ ಸೂಚಿಸಲಾಗಿದೆ. ಕೆಪಿಎಸ್ ಸಿ ಭ್ರಷ್ಟಾಚಾರ ರಹಿತವಾಗಿ, ಪಾರದರ್ಶಕವಾಗಿ ಹಾಗೂ ಮುಕ್ತವಾಗಿ ಕಾರ್ಯನಿರ್ವಹಿಸುವಂತಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು