12:41 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಣಸಗಿ ತಾಲೂಕು ಅಧ್ಯಕ್ಷರಾಗಿ ನಿಂಗಣ್ಣ ಕಟ್ಟಿಮನಿ ಆಯ್ಕೆ

13/03/2025, 11:03

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಪ್ರೊ. ಬಿ. ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಹುಣಸಗಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ನಿಂಗಣ್ಣ ಎಂ. ಗೋನಲ್ (ಜಿಲ್ಲಾ ಸಂಚಾಲಕರು ಯಾದಗಿರಿ) ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್. ಆರ್. ಬಡಿಗೇರ್ ಹಾಗೂ ಸುರಪುರ ತಾಲೂಕು ಡಿಎಸ್ ಎಸ್ ಮುಖಂಡರಾದ ಭೀಮಣ್ಣ ಅಡ್ಡಡೊಡಗಿ ಹಾಗೂ ಹನುಮಂತ ದೊಡ್ಡಮನಿ ಅವರು ಈ ಸಭೆಯಲ್ಲಿ ಉಪಸ್ಥಿತರಿದ್ದರು ಹುಣಸಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಕುಂದು ಕೊರತೆಗಳ ಬಗ್ಗೆ ಹಾಗೂ ಪದಾಧಿಕಾರಿಗಳ ಆಯ್ಕೆಯನ್ನು ಜಿಲ್ಲಾ ಸಂಚಾಲಕರ ನೇತೃತ್ವದಲ್ಲಿ ನೆರವೇರಿತು .
ಹುಣಸಗಿ ತಾಲೂಕು ಸಂಚಾಲಕರಾಗಿ ನಿಂಗಣ್ಣ ಅವರು ಆಯ್ಕೆಯಾಗಿದ್ದಾರೆ ಹಾಗೂ ಸಂಘಟನಾ ಸಂಚಾಲಕರಾಗಿ ಸುರೇಶ,
ಶರಣು, ಶಿವಪ್ಪ, ಮಹಾಂತೇಶ, ರವಿ, ಶಿವಶರಣಪ್ಪ, ಹನುಮಂತ್ರಾಯ ದೊಡ್ಮನೆ , ಶೇಖರ್ ಸುರಪುರ , ಜೆಟ್ಟಪ್ಪ ಹಾದಿಮನಿ , ಪರಶುರಾಮ್ ಚಲವಾದಿ, ಪರಶುರಾಮ್ ಸುರಪುರ, ಜೆಟ್ಟಪ್ಪ ಕಚಕನೂರ ಅವರು ಆಯ್ಕೆಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು