6:48 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ

22/05/2021, 09:20

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnatak@gmail.com

ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 

ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣಾ ಘಟಕಗಳಿಂದ ಪ್ರತಿ ವರ್ಷ 17 ಲಕ್ಷ ಟನ್ ಬೇಡಿಕೆ ಇದೆ. ಆದರೆ ನಮ್ಮ ದೇಶದಲ್ಲಿ ಸುಮಾರು 7.5 ರಿಂದ 8 ಲಕ್ಷ ಟನ್ ಮಾತ್ರ ದೊರೆಯುತ್ತಿದೆ. ಗೋಡಂಬಿ ಬೆಳೆಗೆ ಸಾಕಷ್ಟು ಬೇಡಿಕೆ ಇದ್ದು ರೈತರು ಹೆಚ್ಚೆಚ್ಚು ಬೆಳೆಯಲು ಮುಂದಾಗಬೇಕೆಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ಅಶ್ವಥ್ ನಾರಾಯಣ ರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಇವರು ಹೇಳಿದರು. 

2019ರ ಅಧ್ಯಯನದ ಪ್ರಕಾರ ಗೋಡಂಬಿಗೆ 390 ಕೀಟಗಳು ಬಾಧಿಸುತ್ತಿವೆ. ಅದರಲ್ಲಿ ಪ್ರಮುಖವಾದವು ಟಿ -ಸೊಳ್ಳೆ, ಕಾಂಡ ಕೊರೆಯುವ ಹುಳು ಮತ್ತು ಸುರಂಗ ಕೀಟದ ಜೀವನ ಚಕ್ರ, ಕೀಟ ಬಾಧಿತ ಗಿಡದ ಲಕ್ಷಣಗಳು ಮತ್ತು ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಅಲ್ಲದೆ ರಾಜ್ಯಾದ್ಯಂತ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಗಾಯತ್ರಿ, ಕಾರ್ಯಾಗಾರದ ಸಂಯೋಜಕಿ ಡಾ. ಅಂಬಿಕಾ ಡಿ.ಎಸ್, ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ,ಕೋಲಾರ, ಗೋಡಂಬಿ ಬೆಳೆಗಾರರು, ವಿಸ್ತರಣಾಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ, ವಿಜ್ಞಾನಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು