3:40 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ

22/05/2021, 09:20

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnatak@gmail.com

ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 

ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣಾ ಘಟಕಗಳಿಂದ ಪ್ರತಿ ವರ್ಷ 17 ಲಕ್ಷ ಟನ್ ಬೇಡಿಕೆ ಇದೆ. ಆದರೆ ನಮ್ಮ ದೇಶದಲ್ಲಿ ಸುಮಾರು 7.5 ರಿಂದ 8 ಲಕ್ಷ ಟನ್ ಮಾತ್ರ ದೊರೆಯುತ್ತಿದೆ. ಗೋಡಂಬಿ ಬೆಳೆಗೆ ಸಾಕಷ್ಟು ಬೇಡಿಕೆ ಇದ್ದು ರೈತರು ಹೆಚ್ಚೆಚ್ಚು ಬೆಳೆಯಲು ಮುಂದಾಗಬೇಕೆಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ಅಶ್ವಥ್ ನಾರಾಯಣ ರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಇವರು ಹೇಳಿದರು. 

2019ರ ಅಧ್ಯಯನದ ಪ್ರಕಾರ ಗೋಡಂಬಿಗೆ 390 ಕೀಟಗಳು ಬಾಧಿಸುತ್ತಿವೆ. ಅದರಲ್ಲಿ ಪ್ರಮುಖವಾದವು ಟಿ -ಸೊಳ್ಳೆ, ಕಾಂಡ ಕೊರೆಯುವ ಹುಳು ಮತ್ತು ಸುರಂಗ ಕೀಟದ ಜೀವನ ಚಕ್ರ, ಕೀಟ ಬಾಧಿತ ಗಿಡದ ಲಕ್ಷಣಗಳು ಮತ್ತು ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಅಲ್ಲದೆ ರಾಜ್ಯಾದ್ಯಂತ ಸುಮಾರು ಐವತ್ತಕ್ಕೂ ಹೆಚ್ಚು ರೈತರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಗಾಯತ್ರಿ, ಕಾರ್ಯಾಗಾರದ ಸಂಯೋಜಕಿ ಡಾ. ಅಂಬಿಕಾ ಡಿ.ಎಸ್, ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ,ಕೋಲಾರ, ಗೋಡಂಬಿ ಬೆಳೆಗಾರರು, ವಿಸ್ತರಣಾಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ, ವಿಜ್ಞಾನಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು