1:14 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಸ್ಕಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ನೀರಿನ ಅರವಟ್ಟಿಗೆ ಆರಂಭ

13/03/2025, 11:19

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಕಿತ್ತೂರಾಣಿ ಚನ್ನಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಸತತ 3ನೇ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಮಸ್ಕಿ ತಾಲೂಕು ಘಟಕ ಹಾಗೂ ಬಂಗ್ಲೆ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಮಾನಿ ಬಳಗದಿಂದ ತಾಲೂಕ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರ ನೇತೃತ್ವದಲ್ಲಿ ಆಟೋ ಸ್ಟ್ಯಾಂಡ್ ಬಳಿ ಕುಡಿಯುವ ನೀರಿನ ಅರವಟ್ಟಿಗೆಗೆ ಪುರಸಭೆ ಕೌನ್ಸಿಲರ್ ಶರಣಯ್ಯ ಸ್ವಾಮಿ ಸೋಪ್ಪಿಮಠ ಅವರು ಚಾಲನೆ ನೀಡಿದರು.


ಮಹಾ ಮಂಗಳಾರತಿಯೊಂದಿಗೆ ನೀರಿನ ಅರವಟ್ಟಿಗೆ ಪ್ರಾರಂಭ ಮಾಡಲಾಯಿತು. ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ, ಬಂಗ್ಲೆ
ಮಲ್ಲಿಕಾರ್ಜುನ್ ಅವರ ಆದೇಶದಂತೆ ಬೇಸಿಗೆ ದಿನದಲ್ಲಿ ಜನರಿಗೆ ಸಹಾಯವಾಗುವ ದೃಷ್ಟಿಯಲ್ಲಿ ತಂಪು ಪಾನಿಯನ್ನು ಎಲ್ಲರೂ ನೀಡಲಾಗುತ್ತದೆ. ಬಂಗ್ಲೆ ಮಲ್ಲಿಕಾರ್ಜುನ್ ಅವರ ಕನಸು ನನಸಾಗಲಿ. ಇದು ಮೂರನೇ ವರ್ಷದ ನೀರಿನ ಅರವಟ್ಟಿಗೆಯಾಗಿದೆ. ಪ್ರಥಮ ವರ್ಷ ಮುದುಗಲ್ ಕ್ರಾಸಿನಲ್ಲಿ ಮಾಡಲಾಯಿತು. ಎರಡನೇ ವರ್ಷ ಅಂತರಗಂಗೆ ಬಸವೇಶ್ವರ ಸರ್ಕಲ್ ನಲ್ಲಿ ಮಾಡಲಾಯಿತು. ಬಂಗ್ಲೆ ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆ. ಅವರ ಪ್ರತಿಯೊಂದು ಕೆಲಸ ಹಿಂದೆ ಭಗವಂತನು ಇರುತ್ತಾನೆ
ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಮಾಡುತಿದ್ದೇವೆ. ಸದಾ ಕಾಲ ಹೀಗೆ ನಡೆಯಲಿ ಎಂದು ಹೇಳಿದರು.
ಪುರಸಭೆ ಸದಸ್ಯ ಪಂಪಣ್ಣ ಧನ ಶೆಟ್ಟಿ , ವಸಂತ ವೆಂಕಟಪುರ, ವಿರೂಪಾಕ್ಷಯ್ಯ ಸ್ವಾಮಿ, ಉಮೇಶ್ , ವೀರೇಶ್, ಧನಶೆಟ್ಟಿ , ವಿಶ್ವನಾಥ ಬಸವರಾಜ್ ಸಜ್ಜನ್ ಸೇರಿದಂತೆ ಇನ್ನು ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು