6:41 PM Thursday13 - March 2025
ಬ್ರೇಕಿಂಗ್ ನ್ಯೂಸ್
Home Minister | ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ:… ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್… Budget Session | ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10… ಕೆಎಎಸ್ ಮರು ಪರೀಕ್ಷೆ ಕೋರ್ಟ್ ಆದೇಶದ ಮೇಲೆ ಅವಲಂಬಿತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tourism | ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದ ಶಾಸಕರ ಜತೆ ಪ್ರತ್ಯೇಕ… ಕರಾವಳಿಗೆ ತಂಪೆರಚಿದ ವರ್ಷಧಾರೆ: ಮಂಗಳೂರಿನಲ್ಲಿ ಸಾಧಾರಣ ಮಳೆ; ಬೆಳ್ತಂಗಡಿಯಲ್ಲಿ ಆಲಿಕಲ್ಲು ಸುರಿಮಳೆ ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಬಿಟ್ಟು ಹೋದ ತಂದೆ!!: ಹಠಕ್ಕೆ ಬಿದ್ದು ‘ಕಿಕ್ ಬಾಕ್ಸರ್’ ಆದ… Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ… KPSC ಪರೀಕ್ಷೆಯಲ್ಲಿ ಲೋಪ; ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಇತ್ತೀಚಿನ ಸುದ್ದಿ

Home Minister | ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ್​

13/03/2025, 14:50

ಬೆಂಗಳೂರು(reporterkarnataka.com): ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ. ಪರಮೇಶ್ವರ್​ ಉತ್ತರಿಸಿದ್ದಾರೆ.
ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ ಎಂಬ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉತ್ತರ ನೀಡಿದ್ದಾರೆ.
ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಕೆಲ ಪೊಲೀಸ್​ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗಳೇನು? ಎಂಬ ಪ್ರಶ್ನೆಗೆ
ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೇ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ. ಪರಮೇಶ್ವರ ಲಿಖಿತ ಉತ್ತರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು