8:19 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Student Missing | ಚಿಕ್ಕಮಗಳೂರು: ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿ ಬಾಲಕರು ನಾಪತ್ತೆ

13/03/2025, 18:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದಲ್ಲಿರುವ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ವಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
*ಘಟನೆ ವಿವರ:* ನಾಪತ್ತೆಯಾದ ವಿದ್ಯಾರ್ಥಿಗಳು ಕಳೆದ 10 ದಿನಗಳ ಹಿಂದೆ ಮಧ್ಯರಾತ್ರಿ ಶಾಲೆಯಿಂದ ಕಾಣೆಯಾಗಿದ್ದಾರೆ. ಅವರು ಮನೆಗೂ ತೆರಳಿಲ್ಲ, ಅವರ ಆಸರೆಯ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.


ಈ ಹಿಂದೆಯೂ ಈ ಇಬ್ಬರು ಮಕ್ಕಳು ವಸತಿ ಶಾಲೆಯಲ್ಲಿ ಇರಲು ಹಿಂದೇಟು ಹಾಕಿ ಓಡಿ ಹೋಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಶಾಲಾ ಆಡಳಿತ ಮಂಡಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಪೊಲೀಸ್ ತನಿಖೆ ಮುಂದುವರಿಯುತ್ತಿದೆ.
ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ವಿದ್ಯಾರ್ಥಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಇದೀಗ, ಮಂಗಳೂರು ಬಾಲಕನ ನಾಪತ್ತೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಪೋಷಕರ ಆತಂಕ ಹೆಚ್ಚಿಸಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು