9:08 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್: ಗುಡುಗು ಮಳೆಗೆ ಲ್ಯಾಂಡ್ ಆಗದೆ ವಾಪಸ್ ಹೋದ 3 ವಿಮಾನಗಳ ಪೈಕಿ ಮತ್ತೆ ಹಿಂತಿರುಗಿದ 2 ಫ್ಲೈಟ್

13/03/2025, 20:32

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
.

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಸುರಿದ ಗುಡುಗು ಸಹಿತ ಮಳೆಯ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ 3 ವಿಮಾನಗಳು ವಾಪಸ್ ಹೋಗಿವೆ. ಅದರಲ್ಲಿ ಎರಡು ವಿಮಾನಗಳು ಮತ್ತೆ ಆಗಮಿಸಿ ಸುರಕ್ಷಿತವಾಗಿ ಲ್ಯಾಂಡ್ ಆಗಿವೆ.
ವಿಮಾನ ನಿಲ್ದಾಣವಿರುವ ಬಜಪೆ ಪ್ರದೇಶದಲ್ಲಿ ದಟ್ಟ ಮೋಡ ಹಾಗೂ ಗುಡುಗು ಸಹಿತ ಮಳೆಯಾದ ಪರಿಣಾಮ ಹೈದರಾಬಾದ್ ನಿಂದ
ಮಂಗಳೂರಿಗೆ ಆಗಮಿಸಿದ ವಿಮಾನ ಇಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ಹೈದರಾಬಾದ್ ಗೆ ವಾಪಸ್ ಹೋಗಿತ್ತು. ಅದರೆ, ಅದು ಮತ್ತೆ ವಾಪಸ್ ಆಗಮಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಎರಡು ವಿಮಾನಗಳು ಲ್ಯಾಂಡ್ ಆಗಲು ಸಾಧ್ಯವಾಗದೆ ನೆರೆಯ ಕೇರಳ ರಾಜ್ಯದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿವೆ. ಅದರಲ್ಲಿ ಒಂದು ವಿಮಾನ ಮತ್ತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಸಂಜೆ ದಿಢೀರ್ ಮಳೆಯಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರಿದ ಪರಿಣಾಮ ದಿಢೀರ್ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಆಲಿಕಲ್ಲಿನ ಸುರಿಮಳೆಯಾಗಿತ್ತು. ಮಂಗಳೂರಿನ ಬಜಪೆ, ಕಿನ್ನಿಪದವು ಬಳಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬಂಟ್ವಾಳದಲ್ಲಿ ಹಲವು ಮರಗಳು, ವಿದ್ಯುತ್‌ ಕಂಬಗಳು ಧರೆಗೆ ಉರುಳಿವೆ. ಸುಳ್ಯ, ಕಡಬ ಭಾಗದಲ್ಲಿ ಮಳೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು