1:51 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

13/03/2025, 20:55

ಮಂಗಳೂರು : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿನೋಧರಾ ಪೂಜಾರಿ(ನೋಟರಿ ವಕೀಲರು) ಅವರು ನಿರ್ಮಿಸಿ ಪಿಜಿಏಕೆ ಸ್ಟುಡಿಯೋ ಅರ್ಪಿಸಿರುವ ‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿ ಗೀತೆ ಇತ್ತೀಚೆಗೆ ಲೋಕಾರ್ಪಣೆಗೊಂಡಿತು.

ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಧ್ವನಿಸುರುಳಿ ಬಿಡುಗಡೆಗೊಳಿಸಿದರು. ಈ ಸಂದರ್ಭ ದೇಗುಲದ ಪ್ರಧಾನ ಅರ್ಚಕ ಸದಾಶಿವ ಭಟ್, ಆರ್‌ಎಸ್ಸೆಸ್ ಮುಖಂಡ ಪಿ.ಎಸ್.ಪ್ರಕಾಶ್, ವಾಗ್ಮಿ ಡಾ.ಅರುಣ್ ಉಳ್ಳಾಲ್, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಜೀತ್ ಅಳ್ವ ಏತಮೊಗರು ಗುತ್ತು, ಶೋಧನ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.


ಬ್ರಿಜೇಶ್ ಕುಮಾರ್ ರೈ ಸಹ ನಿರ್ಮಾಪಕರಾಗಿದ್ದು, ಕಲಾ ಸಿಂಚನ ಮೊಹೀತ್ ಪೂಜಾರಿ ಅಡು ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡಿಗೆ ವಿದುಷಿ ಡಾ.ರೂಪಶ್ರೀ ಶ್ರವಣ್, ಆದ್ಯಾ ವಿ.ಸಾಲ್ಯಾನ್, ಶ್ರವಣ್ ಕುಮಾರ್ ಕೊಳಂಬೆ ಧ್ವನಿಯಾಗಿದ್ದಾರೆ. ಗಣೇಶ್ ಅದ್ಯಪಾಡಿ ಚಿತ್ರೀಕರಣ ಹಾಗೂ ಪ್ರಸಾದ್ ಆಚಾರ್ಯ ಕೊಳಂಬೆ ಸಂಕಲನ ಮಾಡಿದ್ದಾರೆ. ಹಾಡಿನ ರೆಕಾರ್ಡಿಂಗ್ ಸಪ್ತಕ್ ಸ್ಟುಡಿಯೋ (ಚಿದಾನಂದ ಕಡಬ)ದಲ್ಲಿ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು