10:54 AM Wednesday18 - June 2025
ಬ್ರೇಕಿಂಗ್ ನ್ಯೂಸ್
ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ನಟ ಅನಂತನಾಗ್ ದಂಪತಿಯ ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ; ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಉಪಸ್ಥಿತಿ

14/03/2025, 20:48

ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟ, ಪದ್ಮಭೂಷಣ ಡಾ.ಅನಂತನಾಗ್ ದಂಪತಿಗೆ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋಳಿ ಹಬ್ಬದ ಶುಭಾಶಯ ಕೋರಿ ಸನ್ಮಾನಿಸಿ ಕುಶಲೋಪರಿ ವಿಚಾರಿಸಿದರು.


ನಟ ಅನಂತನಾಗ ಅವರ ಬೆಂಗಳೂರಿನ ನಿವಾಸಕ್ಕೆ ಇಂದು ಸೌಹಾರ್ದಯುತ ಭೇಟಿ ನೀಡಿದ ಸಚಿವರು ಅನಂತನಾಗ ಮತ್ತು ಗಾಯತ್ರಿ ಅನಂತನಾಗ ಅವರಿಗೆ ಶಾಲು ಹೊದಿಸಿ, ಸುಸ್ಥಿರ ಹಸಿರು ಇಂಧನಕ್ಕೆ ಕೊಡುಗೆ ಎನ್ನುವಂತೆ ಗಿಡ ನೀಡಿ ಅಭಿನಂದಿಸಿದರು. ದಂಪತಿಯ ಕುಶಲೋಪರಿ ವಿಚಾರಿಸಿದ ಸಚಿವರು ಪರಸ್ಪರ ಹೋಳಿ ಹಬ್ಬದ ಶುಭಾಶಯ ಕೋರಿದರು. ಅನಂತನಾಗ್ ಅವರ ಗೃಹದಲ್ಲಿ ನಿರ್ಮಿಸಿದ್ದ ಆರ್ಟ್ ಗ್ಯಾಲರಿ ವೀಕ್ಷಿಸಿ ಸಂತಸಪಟ್ಟರು ಜೋಶಿ.
ಇದೇ ವೇಳೆ ಸಚಿವ ಪ್ರಲ್ಹಾದ ಜೋಶಿ ಮತ್ತು ಕಲಾವಿದ ಅನಂತನಾಗ ಅವರು ಕನ್ನಡ ಚಿತ್ರರಂಗದಲ್ಲಿನ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಸಹಜ ಚರ್ಚೆ ನಡೆಸಿದರು. ನಮ್ಮ ಕಾಲದ ಸಿನಿ ರಂಗಕ್ಕೂ ಈಗಿನ ಚಿತ್ರೋದ್ಯಮಕ್ಕೂ ತುಂಬಾ ವ್ಯತ್ಯಾಸವಿದೆ. ಸರ್ವ ದಿಶೆಯಲ್ಲೂ ಸ್ಯಾಂಡಲ್ ವುಡ್ ಬದಲಾವಣೆ ಕಂಡಿದೆ ಎಂದು ಸುಪ್ರಸಿದ್ಧ ನಟ ಅನಂತನಾಗ ಅನಿಸಿಕೆ ಹಂಚಿಕೊಂಡರು.
ಪ್ರಸ್ತುತ ದಿನಮಾನದಲ್ಲಿ ಭಾರತದ ಅಭಿವೃದ್ಧಿಪರ ಓಟ, ದೇಶದ ವಿಶಿಷ್ಠ ಇತಿಹಾಸ ಹೀಗೆ ವಿಭಿನ್ನ ವಿಷಯಗಳ ಕುರಿತಂತೆ ಪರಸ್ಪರ ಮಾತುಕತೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಹೇಗೆ ಪರಿಣಾಮಕಾರಿ ಕೆಲಸ ಮಾಡುತ್ತಿದೆ ಎಂಬುದನ್ನು ಸಚಿವ ಜೋಶಿ ವಿವರಿಸಿದರು.
ಈ ವೇಳೆ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು