12:23 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕಲರ್ ನೀರಿನಲ್ಲಿ ಕೈ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚು, ಮುಖಕ್ಕೆ ಬಣ್ಣ, ಹಾಡಿಗೆ ಹೆಜ್ಜೆ: ಚೇತನಾ ಶಾಲೆಯಲ್ಲಿ ಹೋಳಿ ಸಂಭ್ರಮ!

14/03/2025, 21:47

ಮಂಗಳೂರು(reporterkarnataka.com): ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.


ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ ಆರಂಭವಾಯಿತು. ನಂತರ ಮಕ್ಕಳ ಕೈಗಳಲ್ಲಿ ರಾಸಾಯನಿಕ ರಹಿತ, ಪರಿಸರ ಸ್ನೇಹಿ ಬಣ್ಣಗಳನ್ನು ನೀಡುತ್ತಿದ್ದಂತೆ ಪರಸ್ಪರ ಹಚ್ಚಿ ಖುಷಿಪಟ್ಟರು. ನಂತರ ಹಾಡುಗಳಿಗೆ ಮಕ್ಕಳು ಹೆಜ್ಜೆ ಹಾಕುತ್ತಾ, ನೀರಿನ ಬೆಲೂನುಗಳನ್ನು ಎಸೆದು ಅದು ಸಿಡಿಯುತ್ತಿದ್ದಂತೆ ಚಪ್ಪಾಳೆ, ಕೇಕೆಗಳೊಂದಿಗೆ ಹರುಷಪಟ್ಟರು. ವಯಸ್ಸು, ಜಾತಿ, ಭಾಷೆ, ಧರ್ಮದ ಭೇದವಿಲ್ಲದೆ, ಶಿಕ್ಷಕರ ಪ್ರೀತಿ ವಾತ್ಸಲ್ಯದೊಂದಿಗೆ, ಆರೈಕೆ, ಆರೋಗ್ಯದ ಕಾಳಜಿಯೊಂದಿಗೆ ಮಕ್ಕಳಲ್ಲಿ ನೈತಿಕ ಸ್ಥೈರ್ಯ, ಹುಮ್ಮಸ್ಸನ್ನು ನೀಡುತ್ತಾ ಬರುತ್ತಿರುವ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಚೇತನಾ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಕಲಿಯುತ್ತಿರುವ ನೂರಕ್ಕೂ ಮಿಕ್ಕಿದ ವಿಶೇಷ ಮಕ್ಕಳಲ್ಲಿ ಹೋಳಿಯ ಸಂಭ್ರಮವನ್ನು ಹೆಚ್ಚಿಸಲು ಯೂತ್ ಆಫ್ ಜಿಎಸ್ ಬಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಯೂತ್ ಆಫ್ ಜಿಎಸ್ ಬಿಯ ಪ್ರಮುಖರು, ಹಿತೈಷಿಗಳು, ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು