4:51 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್

15/03/2025, 16:52

ಬೆಂಗಳೂರು(reporter Karnataka.com): ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸಿಐಡಿ ಹಾಗೂ ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ “CIDECODE” ಸೈಬರ್ ಅಪರಾಧ ಶೃಂಗಸಭೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸೈಬರ್ ಅಪರಾಧಗಳಿಗೆ ಯಾವುದೇ ರೀತಿಯ ಇತಿಮಿತಿಗಳಿಲ್ಲ. ಪ್ರಪಂಚದಲ್ಲಿ ಆಗುತ್ತಿರುವ ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಈವರೆಗೆ 46 ಸಾವಿರಕ್ಕು ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
2023ರಲ್ಲಿ 22 ಸಾವಿರ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಬ್ಯಾಂಕ್ ಅಕೌಂಟ್, ಡೇಟಾ ಹ್ಯಾಕ್, ಸರ್ಕಾರಿ ಖಾತೆಗಳು ಹ್ಯಾಕ್‌ ಆಗುವುದು ಸೇರಿದಂತೆ ನಾನಾ ರೀತಿಯ ಸೈಬರ್ ಅಪರಾಧಗಳು ಆಗುತ್ತಿವೆ. ಇದನ್ನು ತಡೆಗಟ್ಟದೆ ಹೋದರೆ ಮುಂದಿನ ದಿನಗಳಲ್ಲಿ ತೊಂದರೆಗಳಾಗುತ್ತವೆ. ಸಾಮಾನ್ಯ ಅಪರಾಧಗಳಿಗಿಂತ ಸೈಬರ್ ಕ್ರೈಂ ಹೆಚ್ಚಾಗುತ್ತಿವೆ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ದಾಖಲಾಗುತ್ತಿರುವ ಸಾಮಾನ್ಯ ಅಪರಾಧಗಳಲ್ಲಿ ಶೇ. 30ರಷ್ಟು ಸೈಬರ್ ಅಪರಾಧಗಳು ದಾಖಲಾಗುತ್ತಿವೆ. ವೈಟ್‌ಫೀಲ್ಡ್ ವಿಭಾಗದ ವ್ಯಾಪ್ತಿಯಲ್ಲಿ ಶೇ.40ರಷ್ಟು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಇದು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಆರಂಭಿಕ ಹಂತದಲ್ಲೆ ಹೆಚ್ಚು ಫೋಕಸ್ ಮಾಡಿ ತಡೆಗಟ್ಟಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ತಂತ್ರಜ್ಞಾನ ಮತ್ತು ತರಬೇತಿಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಜಾಗತಿಕವಾಗಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ತಾಂತ್ರಿಕ ಬಲವರ್ಧನೆಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಿಐಡಿ ಡಿಕೋಡ್ ಶೃಂಗಸಭೆಯು ಸಹಕಾರಿಯಾಗಲಿದೆ. ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ನಂತಹ ಕಾರ್ಯಕ್ರಮಗಳು ಸುರಕ್ಷಿತ ಡಿಜಿಟಲ್ ಕರ್ನಾಟಕ ಮತ್ತು ಸುರಕ್ಷಿತ ಭಾರತವನ್ನು ನಿರ್ಮಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕೇಂದ್ರ ತನಿಖಾ ಇಲಾಖೆ (ಸಿಐಡಿ) ಆಯೋಜಿಸಿದ್ದ ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ಗಳಲ್ಲಿ ಭಾಗವಹಿಸಿ, ಡೀಪ್ ಫೇಕ್ ಪತ್ತೆ, ಬ್ಲಾಕ್ ಚೈನ್ ತಂತ್ರಜ್ಞಾನ ಬಳಕೆ ಸೇರಿದಂತೆ ಇನ್ನಿತರ ಸೈಬರ್ ಅಪರಾಧಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ತಂತ್ರಾಂಶಗಳನ್ನು ಅಭಿವೃದ್ಧಿಪಡಿಸುವ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಬಹುಮಾನ ನೀಡಿ ಅಭಿನಂದಿಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಸಿಐಡಿ ಡಿಜಿಪಿ ಡಾ. ಎಂ.ಎ.ಸಲೀಂ, ಸೈಬರ್ ಕ್ರೈಂ ಮತ್ತು ನಾರ್ಕೋಟಿಕ್ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಸಿಇಒ ವಿನಾಯಕ ಗೋಡ್ಸೆ, ಇನ್ಫೋಸಿಸ್ ಸಂಸ್ಥೆಯ ಟ್ರಸ್ಟಿ ಸುನೀಲ್ ಕುಮಾರ್ ಧಾರೇಶ್ವರ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು