1:03 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

15/03/2025, 18:09

ಮಂಗಳೂರು(reporterkarnataka.com): ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ಪ್ರತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ‌ ನ್ಯಾಯವಾದಿ ಕೆ .ಪೃಥ್ವಿರಾಜ್ ರೈ ಹೇಳಿದರು.
ಪಿ.ಎ. ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಶನಿವಾರ ನಡೆದ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಪೀಠಿಕೆಯ ಕುರಿತು ಮಂಗಳೂರು
ವಿಶ್ವವಿದ್ಯಾನಿಲಯ ಕಾಲೇಜಿನ ಒಡಂಬಡಿಕೆಯ ಸಂಚಾಲಕ
ಡಾ.ಅಬೂಬಕ್ಕರ್ ಸಿದ್ಧಿಕ್,ವಿವರಿಸಿಕೊಟ್ಟರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ. ಹಾಸಿಂ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಯವಂತ ನಾಯಕ್ (ಪ್ರಾಧ್ಯಾಪಕರು ಅರ್ಥಶಾಸ್ತ್ರವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು), ಶರಫುದ್ದೀನ್ ಪಿ.ಕೆ, (ಎ .ಜಿ .ಎಮ್ ಕ್ಯಾಂಪಸ್ ಪಿ.ಎ.ಇ.ಟಿ , ಪಿ.ಎ ವಿದ್ಯಾ ಸಂಸ್ಥೆಯ), ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥರಾದ ಡಾ.ಸಯ್ಯದ್ ಅಮೀನ್ ಅಹ್ಮದ್, ಪಿ.ಎ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಜಿ ಹರಿಕೃಷ್ಣನ್, ಐ.ಕ್ಯೂ.ಎ.ಸಿ ಸಂಯೋಜಕರರಾದ ವಾಣಿಶ್ರೀ ವೈ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಹಿಬಾ ಮರ್ಯಂ ಕಾರ್ಯಕ್ರಮ ನಿರೂಪಿಸಿದರೆ, ಫರ್ಹಾನ್ ಸ್ವಾಗತಿಸಿ, ತಶ್ಮೀಯಾ ವಂದಿಸಿದರು. ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು