9:09 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಮಂಗಳೂರು: ಈಶ್ವರೀಯ ವಿಶ್ವವಿದ್ಯಾಲಯದಿಂದ ಆಶಾ ಕಾರ್ಯಕರ್ತೆಯರಿಗೆ ‘ವೃದ್ಧರಿಗೆ ಆರೋಗ್ಯ ಆರೈಕೆ’ ತರಬೇತಿ ಕಾರ್ಯಕ್ರಮ

16/03/2025, 11:58

ಮಂಗಳೂರು(reporterkarnataka.com): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಮಂಗಳೂರು ವತಿಯಿಂದ ನಗರದ ಉರ್ವ ಸ್ಟೋರ್ ನಲ್ಲಿರುವ ಬ್ರಹ್ಮಾಕುಮಾರಿಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ “ವೃದ್ಧರಿಗೆ ಆರೋಗ್ಯ ಆರೈಕೆ” ತರಬೇತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಯಿತು. 200 ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ತರಬೇತಿ ಕಾರ್ಯಕ್ರಮವನ್ನು ಬ್ರಹ್ಮಾಕುಮಾರಿಸ್ ಸಂಸ್ಥೆಯ ಪ್ರಧಾನ ಕಚೇರಿ ಮೌಂಟ್ ಅಬುವಿನಿಂದ ಆಗಮಿಸಿದ ಹಿರಿಯ ವೈದ್ಯಾಧಿಕಾರಿ ಡಾ.ಮಹೇಶ್ ಹೇಮಾದ್ರಿ ಅವರು ನೆರವೇರಿಸಿದರು. ಮೂಲತಃ ಕರ್ನಾಟಕದವರಾದ ಅವರು 30 ವರ್ಷಗಳಿಂದ ತನ್ನ ಜೀವನವನ್ನು ಜನಮಾನಸದ ಸೇವೆಗಾಗಿ ಮೌಂಟ್ ಅಬು ವಿನಲ್ಲಿ ಸಮರ್ಪಣೆ ಮಾಡಿರುವರು.
ತರಬೇತಿಯಲ್ಲಿ ಹಿರಿಯ ನಾಗರಿಕರ ಆರೈಕೆ, ಸಮತೋಲಿತ ಆಹಾರ, ಪಾನೀಯಗಳ ಮಾಹಿತಿಯ ಜೊತೆಗೆ ವೃದ್ಧರಲ್ಲಿ ಬರುವ ಸಾಮಾನ್ಯ ಮಾನಸಿಕ ಶಾರೀರಿಕ ತೊಂದರೆಯನ್ನು ಗುರುತಿಸುವುದು, ಇದರ ಕುರಿತಾಗಿ ಸಮಗ್ರ ಮಾಹಿತಿ ಯನ್ನು ನೀಡಲಾಯಿತು.
ಕಾರ್ಯಕ್ರಮದ ದೀಪ ಪ್ರಜ್ವಲನೆಯಲ್ಲಿ ಡಾ. ಜಯಶ್ರೀ, (ವೈದ್ಯಾಧಿಕಾರಿಗಳು, ಬಿಜೈ ಪ್ರಾಥಮಿಕ ಆರೋಗ್ಯ ಶಿಕ್ಷಣ ಕೇಂದ್ರ), ಜ್ಯೋತಿ (ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ), ಮಮತಾ, (ಜಿಲ್ಲಾ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ) ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬಿ. ಕೆ. ವಿಶ್ವೇಶ್ವರಿ ಈಶ್ವರೀಯ ಸಂದೇಶ ನೀಡಿದರು. ಬಿ. ಕೆ. ಆನಂದ್ ಸ್ವಾಗತಿಸಿದರು. ಬಿ.ಕೆ. ರಶ್ಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು