1:27 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಈಶ್ವರೀಯ ವಿಶ್ವವಿದ್ಯಾಲಯದಿಂದ ಆಶಾ ಕಾರ್ಯಕರ್ತೆಯರಿಗೆ ‘ವೃದ್ಧರಿಗೆ ಆರೋಗ್ಯ ಆರೈಕೆ’ ತರಬೇತಿ ಕಾರ್ಯಕ್ರಮ

16/03/2025, 11:58

ಮಂಗಳೂರು(reporterkarnataka.com): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಮಂಗಳೂರು ವತಿಯಿಂದ ನಗರದ ಉರ್ವ ಸ್ಟೋರ್ ನಲ್ಲಿರುವ ಬ್ರಹ್ಮಾಕುಮಾರಿಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ “ವೃದ್ಧರಿಗೆ ಆರೋಗ್ಯ ಆರೈಕೆ” ತರಬೇತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಯಿತು. 200 ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ತರಬೇತಿ ಕಾರ್ಯಕ್ರಮವನ್ನು ಬ್ರಹ್ಮಾಕುಮಾರಿಸ್ ಸಂಸ್ಥೆಯ ಪ್ರಧಾನ ಕಚೇರಿ ಮೌಂಟ್ ಅಬುವಿನಿಂದ ಆಗಮಿಸಿದ ಹಿರಿಯ ವೈದ್ಯಾಧಿಕಾರಿ ಡಾ.ಮಹೇಶ್ ಹೇಮಾದ್ರಿ ಅವರು ನೆರವೇರಿಸಿದರು. ಮೂಲತಃ ಕರ್ನಾಟಕದವರಾದ ಅವರು 30 ವರ್ಷಗಳಿಂದ ತನ್ನ ಜೀವನವನ್ನು ಜನಮಾನಸದ ಸೇವೆಗಾಗಿ ಮೌಂಟ್ ಅಬು ವಿನಲ್ಲಿ ಸಮರ್ಪಣೆ ಮಾಡಿರುವರು.
ತರಬೇತಿಯಲ್ಲಿ ಹಿರಿಯ ನಾಗರಿಕರ ಆರೈಕೆ, ಸಮತೋಲಿತ ಆಹಾರ, ಪಾನೀಯಗಳ ಮಾಹಿತಿಯ ಜೊತೆಗೆ ವೃದ್ಧರಲ್ಲಿ ಬರುವ ಸಾಮಾನ್ಯ ಮಾನಸಿಕ ಶಾರೀರಿಕ ತೊಂದರೆಯನ್ನು ಗುರುತಿಸುವುದು, ಇದರ ಕುರಿತಾಗಿ ಸಮಗ್ರ ಮಾಹಿತಿ ಯನ್ನು ನೀಡಲಾಯಿತು.
ಕಾರ್ಯಕ್ರಮದ ದೀಪ ಪ್ರಜ್ವಲನೆಯಲ್ಲಿ ಡಾ. ಜಯಶ್ರೀ, (ವೈದ್ಯಾಧಿಕಾರಿಗಳು, ಬಿಜೈ ಪ್ರಾಥಮಿಕ ಆರೋಗ್ಯ ಶಿಕ್ಷಣ ಕೇಂದ್ರ), ಜ್ಯೋತಿ (ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ), ಮಮತಾ, (ಜಿಲ್ಲಾ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ) ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬಿ. ಕೆ. ವಿಶ್ವೇಶ್ವರಿ ಈಶ್ವರೀಯ ಸಂದೇಶ ನೀಡಿದರು. ಬಿ. ಕೆ. ಆನಂದ್ ಸ್ವಾಗತಿಸಿದರು. ಬಿ.ಕೆ. ರಶ್ಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು