5:02 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

16/03/2025, 12:02

ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ್ಸ್ ಮ್ಯಾನೆಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ವಹಣೆ ಮಾಡುತ್ತಿದ್ದು ಈ ನಾಲ್ಕು ಘಟಕಗಳ ಮೂಲಕ ಉಭಯ ಜಿಲ್ಲೆಯ 220ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಿಗೆ ಸೇವೆಯನ್ನು ನೀಡುತ್ತಿದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಾಗಾರ “ಬ್ಲಾಸಮ್ – ಮಹಿಳಾ ಆರೋಗ್ಯ ಮತ್ತು ಸಬಲೀಕರಣ ಮತ್ತು ಸ್ಥಿರತೆಯ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ, ಪರಿಸರ ಸ್ನೇಹಿಯಾಗಿ ಋತುಚಕ್ರ ನಿರ್ವಹಣೆ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಪರಿಸರ ಸ್ನೇಹಿ ಮೆನ್ಸುಟ್ರುವಲ್ ಕಪ್ ಬಳಕೆಯ ಬಗ್ಗೆ ತರಬೇತಿಯನ್ನು ನಿಟ್ಟೆ ಯುನಿವರ್ಸಿಟಿಯ ಪ್ರಾಧ್ಯಾಪಕಿ ಡಾ.ಪ್ರಿಯಾ ಡಿ ಆಳ್ವಾ ಮತ್ತು ಶಿಲ್ಪಾ ಶಾಸ್ತ್ರಿಯವರು ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಉಚಿತ menstrual cups ವಿತರಿಸಲಾಗಿದ್ದು. ಮಹಿಳೆಯರ ಆರೋಗ್ಯ ಮತ್ತು ಪರಿಸರ ಸ್ನೇಹಿತ ಜೀವನ ಶೈಲಿಗೆ ಪೂರಕವಾಗಿದೆ. ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್ ಸಹಕರ ನೀಡಿದ್ದರು ಮತ್ತು ಕಾರ್ಯಕ್ರಮವನ್ನು rePurpose Global ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಪ್ರಜ್ವಲ್ ಶೆಣೈ ಕಾರ್ಯಕ್ರಮ ಸಂಯೋಜಿಸಿದರು ಮತ್ತು ಧನುಷ್ M.S , ವಿಜೇಶ್ ದೇವಾಡಿಗ, ನಿಧಿಕೃಷ್ಣ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು