7:13 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

Horanadu | ಸಂಸದ ತೇಜಸ್ವಿ ಸೂರ್ಯ- ಶಿವಶ್ರೀ ದಂಪತಿ ಬಸ್ ಯಾತ್ರೆ: ಹೊರನಾಡಿಗೆ ಆಗಮಿಸಿದ ನವಜೋಡಿಯಿಂದ ದೇವಿಗೆ ವಿಶೇಷ ಪೂಜೆ

16/03/2025, 15:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸದ ತೇಜಸ್ವಿ ಸೂರ್ಯ ನವದಂಪತಿ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಪ್ರಯಾಣ ಬೆಳೆಸಿ ಹೊಸ ಅನುಭವ ಪಡೆದರು. ಸೂರ್ಯ ದಂಪತಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಹೊರನಾಡು ಭಾಗದಲ್ಲಿ ಬಸ್ ಪ್ರಯಾಣ ನಡೆಸಿ ಸಾರ್ವಜನಿಕರ ಗಮನ ಸೆಳೆದರು.


ತೇಜಸ್ವಿ ಸೂರ್ಯ ದಂಪತಿ ತಮ್ಮ ಕಾರು ಬಿಟ್ಟು, ಕಳಸ-ಹೊರನಾಡಿನ ಹಾವು-ಬಳುಕಿನ ರಸ್ತೆಗಳಲ್ಲಿ ಖಾಸಗಿ ಬಸ್ಸಿನಲ್ಲಿ ಸಂಚಾರ ಮಾಡಿ ಪ್ರಕೃತಿಯ ಧಾರಾಳತನವನ್ನು ಆಸ್ವಾದಿಸಿದರು. ತೇಜಸ್ವಿ-ಶಿವಶ್ರೀ ದಂಪತಿ ಮಲೆನಾಡಿನ ಹಸಿರು ಪರ್ವತಗಳು ಮತ್ತು ಮನಮೋಹಕ ವಾತಾವರಣವನ್ನು ಆನಂದಿಸಿದರು. ತೇಜಸ್ವಿ ದಂಪತಿ ಶನಿವಾರ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ದರ್ಶನದ ನಂತರ, ಅವರು ಕಳಸ ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಿಗೆ ಬಸ್ ಮೂಲಕ ಭೇಟಿ ನೀಡಿದರು. ತೇಜಸ್ವಿ ದಂಪತಿ ತಮ್ಮ ಪ್ರವಾಸದ ಸಮಯದಲ್ಲಿ ಜನ ಸಾಮಾನ್ಯರೊಂದಿಗೆ ಸಂವಾದ ನಡೆಸಿದ್ದು, ಅಪರೂಪಕ್ಕೆ ರಾಜಕೀಯ ನಾಯಕರಿಂದ ಬಸ್ಸಿನಲ್ಲಿ ಪ್ರಯಾಣ ನಡೆಸುವ ಅನುಭವ ಸ್ಥಳೀಯರಲ್ಲಿಯೂ ಕುತೂಹಲ ಮೂಡಿಸಿದೆ. ಮಲೆನಾಡಿನ ಶೀತಳ ವಾತಾವರಣದಲ್ಲಿ ಈ ಪ್ರವಾಸ ದಂಪತಿಗೆ ಹೊಸ ಅನುಭವ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು