11:17 AM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Horanadu | ಸಂಸದ ತೇಜಸ್ವಿ ಸೂರ್ಯ- ಶಿವಶ್ರೀ ದಂಪತಿ ಬಸ್ ಯಾತ್ರೆ: ಹೊರನಾಡಿಗೆ ಆಗಮಿಸಿದ ನವಜೋಡಿಯಿಂದ ದೇವಿಗೆ ವಿಶೇಷ ಪೂಜೆ

16/03/2025, 15:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸದ ತೇಜಸ್ವಿ ಸೂರ್ಯ ನವದಂಪತಿ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಪ್ರಯಾಣ ಬೆಳೆಸಿ ಹೊಸ ಅನುಭವ ಪಡೆದರು. ಸೂರ್ಯ ದಂಪತಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಹೊರನಾಡು ಭಾಗದಲ್ಲಿ ಬಸ್ ಪ್ರಯಾಣ ನಡೆಸಿ ಸಾರ್ವಜನಿಕರ ಗಮನ ಸೆಳೆದರು.


ತೇಜಸ್ವಿ ಸೂರ್ಯ ದಂಪತಿ ತಮ್ಮ ಕಾರು ಬಿಟ್ಟು, ಕಳಸ-ಹೊರನಾಡಿನ ಹಾವು-ಬಳುಕಿನ ರಸ್ತೆಗಳಲ್ಲಿ ಖಾಸಗಿ ಬಸ್ಸಿನಲ್ಲಿ ಸಂಚಾರ ಮಾಡಿ ಪ್ರಕೃತಿಯ ಧಾರಾಳತನವನ್ನು ಆಸ್ವಾದಿಸಿದರು. ತೇಜಸ್ವಿ-ಶಿವಶ್ರೀ ದಂಪತಿ ಮಲೆನಾಡಿನ ಹಸಿರು ಪರ್ವತಗಳು ಮತ್ತು ಮನಮೋಹಕ ವಾತಾವರಣವನ್ನು ಆನಂದಿಸಿದರು. ತೇಜಸ್ವಿ ದಂಪತಿ ಶನಿವಾರ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ದರ್ಶನದ ನಂತರ, ಅವರು ಕಳಸ ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಿಗೆ ಬಸ್ ಮೂಲಕ ಭೇಟಿ ನೀಡಿದರು. ತೇಜಸ್ವಿ ದಂಪತಿ ತಮ್ಮ ಪ್ರವಾಸದ ಸಮಯದಲ್ಲಿ ಜನ ಸಾಮಾನ್ಯರೊಂದಿಗೆ ಸಂವಾದ ನಡೆಸಿದ್ದು, ಅಪರೂಪಕ್ಕೆ ರಾಜಕೀಯ ನಾಯಕರಿಂದ ಬಸ್ಸಿನಲ್ಲಿ ಪ್ರಯಾಣ ನಡೆಸುವ ಅನುಭವ ಸ್ಥಳೀಯರಲ್ಲಿಯೂ ಕುತೂಹಲ ಮೂಡಿಸಿದೆ. ಮಲೆನಾಡಿನ ಶೀತಳ ವಾತಾವರಣದಲ್ಲಿ ಈ ಪ್ರವಾಸ ದಂಪತಿಗೆ ಹೊಸ ಅನುಭವ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು