6:31 PM Sunday16 - March 2025
ಬ್ರೇಕಿಂಗ್ ನ್ಯೂಸ್
ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ… PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3… ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಪ್ರತಿಪಾದನೆ ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ.… ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ… VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ

16/03/2025, 15:35

ಬಂಟ್ವಾಳ(reporterkarnataka.com): ಪರಿಶುದ್ಧ ಗಂಗೆ ಸ್ವರೂಪ ಹಿಂದೂ ಧರ್ಮ, ಈ ಹಿಂದೂ ಧರ್ಮದ ಮೇಲೆ ನಿರಂತರ ಆಘಾತ ನಡೆಯುತ್ತಿದೆ. ಹೋಳಿ ಇರಲಿ, ದೀಪಾವಳಿ ಇರಲಿ ಹಿಂದೂಗಳಲ್ಲಿ ಸಾಂಸ್ಕೃತಿಕ ಆಘಾತ ನಡೆಯುತ್ತಿದೆ. ಹಿಂದೂಗಳ ಆಚರಣೆಯ ಬಗ್ಗೆ ಪ್ರಸಾರ ಮಾಧ್ಯಮಗಳ ಮುಖಾಂತರ ಅಪಹಾಸ್ಯ ಮಾಡಲಾಗುತ್ತಿದೆ. ಹಿಂದೂಗಳ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನಗಳ ಮೇಲೆ ಆರೋಪಗಳನ್ನು ಮಾಡಲಾಗುತ್ತದೆ. ಹಿಂದೂ ಸಮಾಜ ಜಾಗೃತವಾದರೆ ಇತರ ಪಂಥೀಯರು ಏನೂ ಮಾಡಲು ಸಾಧ್ಯವಿಲ್ಲ. ಸಂತರ ಮೇಲೆ ಆರೋಪಗಳನ್ನು ಹಾಕಲಾಗುತ್ತದೆ, ಆಕ್ರಮಣಗಳನ್ನು ಮಾಡಲಾಗುತ್ತದೆ. ಎಡಪಂಥೀಯರು ಕ್ರಿಟಿಕಲ್ ರೇಸ್ ಥಿಯರಿ ಮುಖಾಂತರ ಹಿಂದೂಗಳನ್ನು ಜಾತಿ ಮತ ಪಂಥಗಳ ಹೆಸರಿನಲ್ಲಿ ವಿಭಜನೆಯನ್ನು ಮಾಡಲಾಗುತ್ತಿದೆ. ಅಮೆರಿಕದಿಂದ ಪ್ರಾಯೋಜಿತ ಮತಾಂತರ ಹಾಗೂ ದೇಶ ವಿರೋಧಿ ಷಡ್ಯಂತ್ರಕ್ಕೆ ಹಿಂದೂ‌ ಸಮಾಜ ವ್ಯಾಪಕವಾಗಿ ಬಲಿಯಾಗುತ್ತಿದೆ. ಇದೆಲ್ಲದಕ್ಕೂ ಪರಿಹಾರವೆಂದರೆ ನಮ್ಮ ಧರ್ಮ ರಕ್ಷಣೆ ನಮ್ಮದೇ ಕರ್ತವ್ಯವಾಗಿದೆ ಎಂಬ ಅರಿವು ನಮ್ಮಲ್ಲಿ ನಿರ್ಮಾಣವಾಗಬೇಕು. ಧರ್ಮ ರಕ್ಷಣೆಗಾಗಿ ಸರ್ವಸ್ವದ ತ್ಯಾಗ ಮಾಡಲು ನಾವು ಸಿದ್ಧರಾಗಿರಬೇಕು ಎಂದು
ಚಕ್ರವರ್ತಿ ಸೂಲಿಬೆಲೆ ಹೇಳಿದರು.


ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಭಾನುವಾರದಂದು ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನವು ಶಂಖನಾದ ಮತ್ತು ವೇದಮಂತ್ರ ಪಠಣದೊಂದಿಗೆ ಪ್ರಾರಂಭಿಸಲಾಯಿತು. ಅಧಿವೇಶನದ ಉದ್ಘಾಟನೆಯನ್ನು ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಸನಾತನ ಸಂಸ್ಥೆಯ ಸಂತರಾದ ಪೂಜ್ಯ ರಮಾನಂದ ಗೌಡ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾ. ಕೃಷ್ಣಮೂರ್ತಿ, ಯುವ ಬ್ರಿಗೇಡ್‌ನ ಸಂಸ್ಥಾಪಕ
ಚಕ್ರವರ್ತಿ ಸೂಲಿಬೆಲೆ, ಉದ್ಯಮಿಗಳಾದ ಎಂ. ಜೆ. ಶೆಟ್ಟಿ ಮತ್ತು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕರಾದ ಗುರುಪ್ರಸಾದ್ ಗೌಡ ಅವರ ದಿವ್ಯ ಹಸ್ತಗಳಿಂದ ದೀಪ ಪ್ರಜ್ವಲನೆಯನ್ನು ಮಾಡಿ ಅಧಿವೇಶನದ ಉದ್ಘಾಟನೆಯನ್ನು ಮಾಡಲಾಯಿತು.
*ಸ್ವಾರ್ಥ ಮರೆತು ನಾವು ಪರಮಾರ್ಥದ ಕಡೆಗೆ ಹೋಗಬೇಕಾಗಿದೆ! – ನ್ಯಾಯವಾದಿ ಶ್ರೀ. ಕೃಷ್ಣಮೂರ್ತಿ:*
ಸ್ವಾರ್ಥ ಮರೆತು ನಾವು ಪರಮಾರ್ಥದ ಕಡೆಗೆ ಹೋಗಬೇಕಾಗಿದೆ, ವಿವಿಧ ಸಂಘಟೆನೆಗಳೆಲ್ಲಾ ಸೇರಿ ಹಿಂದೂ ರಾಷ್ಟ್ರದೆಡೆಗೆ ಸಾಗಬೇಕಾಗಿದೆ. ಇದಕ್ಕಾಗಿ ನ್ಯಾಯ ವ್ಯವಸ್ಥೆಯನ್ನು ಅರಿತುಕೊಂಡು ಅದರ ಸದುಪಯೋಗವನ್ನು ಮಾಡಬೇಕು. ನ್ಯಾಯವಾದಿಗಳು ತಮ್ಮ ಕರ್ತವ್ಯವೆಂದು ರಾಷ್ಟ್ರ ಮತ್ತು ಧರ್ಮದ ವಿಚಾರಗಳಲ್ಲಿ ದಿಟ್ಟ ಹೆಜ್ಜೆಗಳನ್ನಿಡಬೇಕು ಎಂದು ಉಪಸ್ಥಿತ ವಕೀಲರಿಗೆ ಕರೆ ನೀಡಿದರು.
ಅಧಿವೇಶನದಲ್ಲಿ ಹಿಂದೂ ರಾಷ್ಟ್ರ ಆಕ್ಷೇಪ ಮತ್ತು ಖಂಡನೆ, ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ ಈ ೨ ಗ್ರಂಥಗಳ ಇ-ಬುಕ್ ನ ಉದ್ಘಾಟನೆಯನ್ನು ಗಣ್ಯರ ಹಸ್ತದಿಂದ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು