8:49 AM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Victoria Hospital | ವೃದ್ಧ ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ಶೋಕಾಸ್‌ ನೋಟಿಸ್‌

16/03/2025, 19:46

ಬೆಂಗಳೂರು(reporterkarnataka.com): ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ.
ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್‌. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್‌ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಅತ್ತೆ ಮಾವನ ಮನೆಗೆ ತೆರಳಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌, ಇದು ಇಲಾಖೆಗೆ ತೀವ್ರ ಮುಜುಗರ ತರುವ ವಿಷಯವಾಗಿದ್ದು, ಕೂಡಲೇ ವೈದ್ಯೆ ಪ್ರಿಯದರ್ಶಿನಿಗೆ ಶೋಕಾಸ್‌ ನೋಟಿಸ್‌ ನೀಡಿ, ವಿವರಣೆ ಪಡೆಯಿರಿ ಎಂದು ಸೂಚಿಸಿದರು. ಇದರ ಬೆನ್ನಲ್ಲೇ ಈಗ ಡಿಎಂಇ ಡಾ. ಸುಜಾತಾ ರಾಥೋಡ್ ನೋಟಿಸ್‌ ಜಾರಿ ಮಾಡಿದ್ದಾರೆ.
ವೃದ್ಧ ಅತ್ತೆ-ಮಾವಂದಿರ ಮೇಲೆ ನಡೆದಿರುವ ಹಲ್ಲೆ ವೀಡಿಯೋ ಮೇರೆಗೆ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ವರ್ತನೆಯು ಸರ್ಕಾರಿ ವೈದ್ಯಾಧಿಕಾರಿಗೆ ತರವಲ್ಲದ್ದಾಗಿದೆ. ಆದ್ದರಿಂದ ಪ್ರಕರಣದ ಕುರಿತು ಲಿಖಿತ ಸಮಜಾಯಿಷಿ ನೀಡಲು ನೋಟಿಸ್‌ ಜಾರಿ ನೀಡಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮೊಹಮದ್‌ ಮೋಶಿನ್‌ ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಆಸ್ಪತ್ರೆಗಳಲ್ಲಿ ವಯೋವೃದ್ಧ ಪೋಷಕರನ್ನು ಬಿಟ್ಟು ಹೋಗುತ್ತಿರುವ, ಆಸ್ತಿ ಬರೆಯಿಸಿಕೊಂಡು ಇಲ್ಲಿಗೆ ತಂದು ಬಿಡುತ್ತಿದ್ದ ಪ್ರಕರಣಗಳ ಕುರಿತು ಸಚಿವರ ಗಮನಕ್ಕೆ ತಂದಿದ್ದ ಪ್ರಧಾನ ಕಾರ್ಯದರ್ಶಿಗಳು, ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವ ಕುರಿತು ಕೆಲವು ಶಿಫಾರಸುಗಳುನ್ನು ನೀಡಿದ್ದರು.
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಆಸ್ಪತ್ರೆಗಳಲ್ಲಿ ಗುಣಮಟ್ಟ ಹಾಗೂ ಸುಧಾರಣೆ ತರಲು ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸದಾ ಬದ್ಧರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು