7:31 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಹೋಳಿ ಆಚರಣೆ: ಓಕುಳಿಯಾಟ

16/03/2025, 19:58

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆ ವತಿಯಿಂದ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಭಾನುವಾರ ಅದ್ದೂರಿ ಹೋಳಿ ಹಬ್ಬ ಆಚರಿಸಲಾಯಿತು.
ಕಾಮನ ಮೂರ್ತಿ ದಹನ ಮಾಡಿ ಎಲ್ಲರೂ ಸಂಭ್ರಮದಿಂದ ಒಬ್ಬರಿಗೊಬ್ಬರು ಬಣ್ಣದ ಓಕುಳಿ ಆಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾಥ ಮೇಟಿ ಮಾತನಾಡಿ, ಕಾಮ, ಕ್ರೋಧ, ಲೋಭ, ಮದ, ಮತ್ಸರ ಎಂಬ ಕೆಟ್ಟ ಗುಣಗಳನ್ನು ಕಾಮ ದಹನದ ಮೂಲಕ ಸುಟ್ಟು ಹಾಕಿ ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ಹೋಗಬೇಕು ಎಂದು ಹೋಳಿ ಹಬ್ಬ ಆಚರಿಸುತ್ತೆವೆ ಎಂದು ಹೇಳಿದರು.
ಹಿರಿಯರಾದ ಡಾ. ಬಸವರಾಜ ದಿಂಡೂರು ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಐದು ದಿನ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತೇವೆ. ನಮ್ಮ ಭಾಗದ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಹೋಳಿ ಹಬ್ಬ ಆವರಿಸುತ್ತೇವೆ. ಉತ್ತರ ಕರ್ನಾಟಕ ಸಂಸ್ಕೃತಿ ಬೆಳೆಸುವಲ್ಲಿ ಯಾವಾಗಲೂ ಎತ್ತರದಲ್ಲಿ ಇರುತ್ತದೆ ಎಂದು ಹೇಳಿದರು.
ಕಿರುತೆರೆ ನಟಿ ಶ್ರೀದೇವಿ ಮೆಳ್ಳಿಗಟ್ಟಿ ಮಾತನಾಡಿ, ಉತ್ತರ ಕರ್ನಾಟಕದ ಗಂಡು ಹಬ್ಬ ಹೋಳಿ ಹಬ್ಬವನ್ನು ಎಲ್ಲರೂ ಸೇರಿ ಸಂಭ್ರಮದಿಂದ ಆಚರಿಸಿ, ನಾವೆಲ್ಲರೂ ಬಣ್ಣ ಆಡುವ ಮೂಲಕ ಖುಷಿಪಟ್ಟು ನಮ್ಮ ಸಂಸ್ಕೃತಿ ಉಳಿಸಲು ಈ ರೀತಿಯ ಹಬ್ಬಗಳನ್ನು ಆಚರಣೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ಕಾರ್ಯದರ್ಶಿ ಬಸಯ್ಯ ನಂದಿಕೋಲ, ಶಾಂತೇಶ್ ಹಿರೇಮಠ, ಶಿವನಗೌಡ ಬಿರಾದಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು