11:39 AM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ: ಮಾ. 20- 23: ಮಂಗಳೂರಿನಲ್ಲಿ ಬೈಬಲ್ ಮಹಾ ಸಮ್ಮೇಳನ

16/03/2025, 20:27

ಮಂಗಳೂರು(reporterkarnataka.com): ಕ್ರಿಸ್ತ ಜಯಂತಿ – 2025 ಜ್ಯುಬಿಲಿ ವರ್ಷ ಹಾಗೂ ಕ್ಯಾರಿಸ್ಮಾಟಿಕ್‌ ಸೇವಾ ಸಂಚಾಲನದ ಸುವರ್ಣ ಮಹೋತ್ಸವದ ಅಂಗವಾಗಿ ಬೈಬಲ್ ಮಹಾ ಸಮ್ಮೇಳನ ಮಾರ್ಚ್ 20ರಿಂದ 23ರ ತನಕ ನಗರದ ಕುಲಶೇಖರ ಕೋರ್ಡೆಲ್ ಹೋಲಿ ಕ್ರಾಸ್‌ ಚರ್ಚ್‌ನ ತೆರೆದ ಮೈದಾನದಲ್ಲಿ ಪ್ರತಿ ದಿನ ಸಂಜೆ 4ರಿಂದ ರಾತ್ರಿ 8.30ರ ತನಕ ನಡೆಯಲಿದೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.
ಈ ಪ್ರಾರ್ಥನಾ ಸಭೆಯಲ್ಲಿ ಬಲಿ ಪೂಜೆ, ಪರಮ ಪ್ರಸಾದದ ಆರಾಧನೆ, ಪ್ರವಚನ ಮತ್ತು ವಿಶೇಷ ಪ್ರಾರ್ಥನಾ ವಿಧಿ ಇರಲಿದ್ದು, ಕೇರಳದ ಆನಕ್ಕರ ಮೇರಿಯನ್‌ ರಿಟ್ರೀಟ್‌ ಸೆಂಟರಿನ ನಿರ್ದೇಶಕ ವಂದನೀಯ ಫಾದರ್‌ ಡೊಮಿನಿಕ್‌ ನಲಮನಲ್‌ ಅವರು ವಿಶೇಷ ಪ್ರಬೋಧನೆ ನೀಡಲಿದ್ದಾರೆ ಎಂದು ಪ್ರತಿಕಾ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು