2:27 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Govt Hospital | ಮಂಗಳೂರು ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗೆ ಆರೋಗ್ಯ ಆಯುಕ್ತರ ಭೇಟಿ: ಸಿಬ್ಬಂದಿ ನೇಮಕಾತಿ ಪರಿಶೀಲನೆ ಭರವಸೆ

16/03/2025, 21:54

ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿದರು.
ಮೊದಲು ವೆನ್ ಲಾಕ್ ಗೆ ಆಗಮಿಸಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ದೊರಕುತ್ತಿರುವ ಸೌಲಭ್ಯಗಳ ಮಾಹಿತಿ ಪಡೆದ ಅವರು, ಸ್ವಚ್ಛತೆ ಮತ್ತು ಆಸ್ಪತ್ರೆ ಪರಿಸರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೆನ್ ಲಾಕ್ ಮೂಲಸೌಕರ್ಯವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಸಿಬ್ಬಂದಿ ನೇಮಕಾತಿಯ ಬಗ್ಗೆ ಬೇಡಿಕೆ ಬಂದಿದ್ದು, ಸರಕಾರದ ಮಟ್ಟದಲ್ಲಿ ಇದನ್ನು ಪರಿಶೀಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ಬಳಿಕ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನವಜಾತ ಶಿಶುಘಟಕ ವೀಕ್ಷಿಸಿದ ಅವರು, ಆಸ್ಪತ್ರೆಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಸ್ಥಾಪನೆಯಿಂದ ಶಿಶು ಮರಣ ಪ್ರಮಾಣ ಕಡಿಮೆಗೊಂಡಿರುವುದಕ್ಕೆ ಶ್ಲಾಘಿಸಿದರು. ಸಿಎಸ್ಆರ್ ಅನುದಾನದಿಂದ ರೋಗಿಗಳಿಗೆ ಅತ್ಯಾಧುನಿಕ ಸೌಲಭ್ಯ ಗಳನ್ನು ಒದಗಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ. ಶಿವಕುಮಾರ್, ಲೇಡಿಗೋಷನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು