3:33 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ISS | ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಸ್ಪೇಸ್‌ಎಕ್ಸ್ ಕ್ಯಾಪ್ಸುಲ್: ಸುನೀತಾ ವಿಲಿಯಂ, ವಿಲ್ಮೋರ್ ಭೂಮಿಗೆ ಮರಳುವ ಹಾದಿ ಸುಗಮ

16/03/2025, 23:30

reporterkarnataka.com

ಸ್ಪೇಸ್‌ಎಕ್ಸ್ ಕ್ಯಾಪ್ಸುಲ್ ಭಾನುವಾರ ಮುಂಜಾನೆ ನಾಲ್ವರು ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಯಶಸ್ವಿಯಾಗಿ ತಲುಪಿಸಿದ್ದು, ಇದರೊಂದಿಗೆ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಮರಳಿ ಭೂಮಿಗೆ ಕರೆದು ತರುವ ಹಾದಿ ಸುಗಮವಾಗಿದೆ.
ಸುಮಾರು 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರನ್ನು ಮನೆಗೆ ಕರೆತರುವ ಗುರಿಯನ್ನು ಇದು ಹೊಂದಿದೆ.
ಶುಕ್ರವಾರ ಸಂಜೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯೊಂದಿಗೆ ಸ್ಪೇಸ್ ಎಕ್ಸ್ ನಾಸಾದ ಕ್ರ್ಯೂ -10 ನಾಲ್ವರು ಗಗನಯಾತ್ರಿಗಳನ್ನು ಹೊತ್ತು ಪ್ರಯಾಣ ಪ್ರಾರಂಭಿಸಿತ್ತು. ಸುಮಾರು 29 ಗಂಟೆಗಳ ನಂತರ ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ಭಾನುವಾರದಂದು ಬೆಳಿಗ್ಗೆ 4:04 GMT ಕ್ಕೆ ISS ನೊಂದಿಗೆ ಡಾಕ್ ಮಾಡಿತು.
ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಅಸಮರ್ಪಕ ಕಾರ್ಯದಿಂದ
ಸುನಿತಾ ಮಿಲಿಯಂ ಮತ್ತು ವಿಲ್ಮೋರ್ ಅವರು ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದರು. ಇದರಿಂದ ವಿಲ್ಮೋರ್ ಮತ್ತು ವಿಲಿಯಮ್ಸ್ ಅವರನ್ನು ಮರಳಿ ಭೂಮಿಗೆ ಕರೆದು ತರುವ ಕಾರ್ಯ ವಿಳಂಬವಾಗಿತ್ತು.
ಮೂಲತಃ, ಈ ಇಬ್ಬರು ಅನುಭವಿ ಗಗನಯಾತ್ರಿಗಳು ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು