2:26 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ ನಂತ್ರ ಗ್ಯಾರಂಟಿ ಯೋಜನೆ ನಿಂತೋಗುತ್ತೆ ಎಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ: ಬಿಜೆಪಿಗೆ ಸಿಎಂ ಪ್ರಶ್ನೆ

17/03/2025, 13:04

ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದಿರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ. ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸೋತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಿಮ್ಮ ಟೀಕೆ, ಆಪಾದನೆಗಳು ಮಾಡಿದ ನಂತರ ಉಪಚುನಾವಣೆಗಳು ನಡೆದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಗೆದ್ದಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆದ್ದಿದ್ದೇವೆ. ಶಿಗ್ಗಾಂವಿ ಕ್ಷೇತ್ರದಲ್ಲಿ13 ಸಾವಿರ ಅಂತರದಿಂದ ಹಾಗೂ ಸಂಡೂರು ಕ್ಷೇತ್ರದಲ್ಲಿ 9 ಸಾವಿರ ಅಂತರದಲ್ಲಿ ಗೆದ್ದಿದ್ದೇವೆ. ಮೂರೂ ಕಡೆ ಮಕಾಡೆ ಮಲಗಿದಿರಿ ನೀವು. ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂದು ಸಿಎಂ ನುಡಿದರುಮ ಎರಡು ಬಾರಿ ಅಧಿಕಾರ ಮಾಡಿರುವ ನೀವು ಜನರ ಆಶೀರ್ವಾದದಿಂದ ಗೆದ್ದಿದ್ದೀರೇ? ಆಪರೇಶನ್ ಕಮಲ ಮಾಡಿ 18 ಕ್ಷೇತ್ರಗಳನ್ನು ಗೆದ್ದಿರಿ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಟೀಕಿಸಿದರು.
ಬಸವರಾಜ ಬೊಮ್ಮಾಯಿ ಅವರ ಮಗನ ವಿರುದ್ಧ ಗೆಲ್ಲಬೇಕಾದರೆ ಎಲ್ಲಾ ಜಾತಿ ಜನರು ಮತ ನೀಡಿದ್ದರಿಂದ ನಾವು ಗೆದ್ದಿದ್ದೇವೆ. ನಾವು ಅಪರೇಶನ್ ಕಾಂಗ್ರೆಸ್ ಮಾಡಿಲ್ಲ. ನಾವು ಗ್ಯಾರಂಟಿ ಕೊಡದೇ ಹೋಗಿದ್ದರೆ ಬಡವರು ಮತ ಹಾಕುತ್ತಿರಲಿಲ್ಲ . ಮಧ್ಯವರ್ತಿಗಳಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪುವ ಈ ಯೋಜನೆಗಳು ಬಡವರ ಬದುಕಿಗೆ ಭರವಸೆ ನೀಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು