1:48 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Govt Hospital | ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ: ಸ್ತ್ರೀರೋಗ ತಜ್ಞೆಯೂ ಇಲ್ಲ

17/03/2025, 14:37

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ಕಿವಿ, ಮೂಗು, ಗಂಟಲು (ಇಎನ್‌ಟಿ) ತಜ್ಞರ ಕೊರತೆ ಉಂಟಾಗಿದೆ. ಈ ನಡುವೆ, ಸ್ತ್ರೀರೋಗ ತಜ್ಞೆ ಡಾ. ಗೌಸಿಯಾ ಬಾನು ರಾಜೀನಾಮೆ ನೀಡಿದ ಕಾರಣ, ಮಹಿಳಾ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಿಲ್ಲ.
ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ 300ಕ್ಕೂ ಹೆಚ್ಚು ಹಳ್ಳಿಗಳ ಜನತೆ ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡ ರೋಗಿಗಳು ತುರ್ತು ಚಿಕಿತ್ಸೆಗಾಗಿ, ಖಾಸಗಿ ಆಸ್ಪತ್ರೆಗಳು, ಕೋಲಾರ , ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಗಳು ಅಥವಾ ಆಂಧ್ರಪ್ರದೇಶದ ಮದನಪಲ್ಲಿಗೆ ತೆರಳುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಜನರು ದೂರ ಪ್ರಯಾಣ, ಹೆಚ್ಚಿದ ವೆಚ್ಚ, ಮತ್ತು ಚಿಕಿತ್ಸೆಗಾಗಿ ನಿರೀಕ್ಷಿಸುವ ಸಮಸ್ಯೆ ಎದುರಿಸುತ್ತಿದ್ದಾರೆ.
ಸರ್ಕಾರ ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಅಗತ್ಯ ತಜ್ಞ ವೈದ್ಯರನ್ನು ನೇಮಕ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತ್ವರಿತ ಕ್ರಮ ಕೈಗೊಂಡು, ತಾಲ್ಲೂಕು ಮಟ್ಟದಲ್ಲಿ ವೈದ್ಯರ ನೇಮಕಾತಿ ಖಾಯಂಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು