9:42 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

Govt Hospital | ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ: ಸ್ತ್ರೀರೋಗ ತಜ್ಞೆಯೂ ಇಲ್ಲ

17/03/2025, 14:37

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ಕಿವಿ, ಮೂಗು, ಗಂಟಲು (ಇಎನ್‌ಟಿ) ತಜ್ಞರ ಕೊರತೆ ಉಂಟಾಗಿದೆ. ಈ ನಡುವೆ, ಸ್ತ್ರೀರೋಗ ತಜ್ಞೆ ಡಾ. ಗೌಸಿಯಾ ಬಾನು ರಾಜೀನಾಮೆ ನೀಡಿದ ಕಾರಣ, ಮಹಿಳಾ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಿಲ್ಲ.
ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ 300ಕ್ಕೂ ಹೆಚ್ಚು ಹಳ್ಳಿಗಳ ಜನತೆ ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡ ರೋಗಿಗಳು ತುರ್ತು ಚಿಕಿತ್ಸೆಗಾಗಿ, ಖಾಸಗಿ ಆಸ್ಪತ್ರೆಗಳು, ಕೋಲಾರ , ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಗಳು ಅಥವಾ ಆಂಧ್ರಪ್ರದೇಶದ ಮದನಪಲ್ಲಿಗೆ ತೆರಳುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಜನರು ದೂರ ಪ್ರಯಾಣ, ಹೆಚ್ಚಿದ ವೆಚ್ಚ, ಮತ್ತು ಚಿಕಿತ್ಸೆಗಾಗಿ ನಿರೀಕ್ಷಿಸುವ ಸಮಸ್ಯೆ ಎದುರಿಸುತ್ತಿದ್ದಾರೆ.
ಸರ್ಕಾರ ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಅಗತ್ಯ ತಜ್ಞ ವೈದ್ಯರನ್ನು ನೇಮಕ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತ್ವರಿತ ಕ್ರಮ ಕೈಗೊಂಡು, ತಾಲ್ಲೂಕು ಮಟ್ಟದಲ್ಲಿ ವೈದ್ಯರ ನೇಮಕಾತಿ ಖಾಯಂಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು