6:17 AM Wednesday18 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ: ಶಿಕ್ಷಣ ಇಲಾಖೆಗೆ ಡಾ. ಬಿಳಿಮಲೆ ಆಗ್ರಹ

17/03/2025, 20:11

ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿಯೇ ಹೆಚ್ಚು ಖಾಸಗಿ ಕೇಂದ್ರ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಬೋಧನೆಯನ್ನು ಕೈಗೊಳ್ಳದಿದ್ದರೂ ಶಿಕ್ಷಣ ಇಲಾಖೆ ಈ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವಿಷಾದನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಅಂತಹ ಕೆಲವು ಶಾಲೆಗಳ ಪಟ್ಟಿಯನ್ನು ಒದಗಿಸಿದೆ. ಇಲಾಖಾಧಿಕಾರಿಗಳು ತನಿಖೆ ಮಾಡಿದರೆ ಸತ್ಯ ತಿಳಿಯುತ್ತದೆ ಎಂದು ಹೇಳಿದ್ದಾರೆ.
ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವ ಕನ್ನಡ ಭಾಷೆಯ ಬಗ್ಗೆ ಇಲಾಖೆ ತೋರುವ ಅಗೌರವವಷ್ಟೇ ಅಲ್ಲ ನೆಲದ ಕಾನೂನಿನ ಉಲ್ಲಂಘನೆಯೂ ಆಗಿರುತ್ತದೆ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ ಎಂದಿದ್ದಾರೆ.
ಶಿಕ್ಷಣ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ೨೦೨೦ರಲ್ಲಿ ರಚನೆಯಾಗಿರುವ ಸಮಿತಿಯ ಸಭೆಯನ್ನು ಕೂಡಲೇ ಕರೆಯಬೇಕೆಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು