9:07 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು