12:14 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Drugs | ಬೃಹತ್ ಡ್ರಗ್ಸ್ ಜಾಲ ಬೇಧಿಸಿದ ಮಂಗಳೂರು ಪೊಲೀಸರು: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶ್ಲಾಘನೆ

17/03/2025, 21:26

ಬೆಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಶ್ಲಾಘಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಜಾಲದ ಕಬಂಧಬಾಹುಗಳಲ್ಲಿ ಬಂಧಿಯಾಗಿದ್ದು ಜನಸಾಮಾನ್ಯರು ಆತಂಕ ಪಡುವಂತಹ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಈ ಜಾಲದ ಬೆನ್ನುಬಿದ್ದ ಪೊಲೀಸರು ಅಂದಾಜು 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದು ಆಫ್ರಿಕಾ ಮೂಲದ ಇಬ್ಬರು ಮಹಿಳೆಯರು ಮತ್ತು ಸ್ಥಳೀಯ ಯುವಕನೋರ್ವನನ್ನು ಬಂಧಿಸಿರುವುದು ಪೋಲೀಸರ ಈ ಸಾಹಸಕಾರಿ ಕಾರ್ಯಾಚರಣೆಯನ್ನು ಪ್ರತಿಯೊಬ್ಬ ನಾಗರಿಕನೂ ಕೂಡ ಪ್ರಶಂಸಿಸಬೇಕಾಗಿದೆ.
ಇದಕ್ಕಾಗಿ ರಾಜ್ಯ ಗೃಹ ಇಲಾಖೆ, ಪೊಲೀಸ್ ಇಲಾಖೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯನ್ನೂ ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮಂಗಳೂರು ಶಿಕ್ಷಣ ಕಾಶಿ ಎಂದೇ ಹೆಸರು ಪಡೆದಿದ್ದು ಇತ್ತೀಚಿನ ದಿನಗಳಲ್ಲಿ ಈ ಹೆಸರಿಗೆ ಮಸಿ ಬಳಿಯುವಂತೆ ಡ್ರಗ್ಸ್ ದಂಧೆ, ಅಕ್ರಮ ದಂಧೆಗಳು ಕಾರ್ಯಾಚರಿಸುತ್ತಿದ್ದವು. ಇದು ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಹೊರಜಿಲ್ಲೆ, ರಾಜ್ಯ, ರಾಷ್ಟ್ರಗಳಿಂದ ಬಂದು ಶಿಕ್ಷಣ ಪಡೆಯುತ್ತಿರುವ ಮಕ್ಕಳ ಪೋಷಕರ ಆತಂಕಕ್ಕೆ ಕಾರಣವಾಗಿತ್ತು. ಆದರೆ ಪೊಲೀಸ್ ಇಲಾಖೆ ಡ್ರಗ್ಸ್ ದಂಧೆಯನ್ನು ಬೇರು ಸಮೇತ ಕಿತ್ತುಹಾಕಲು ಪಣತೊಟ್ಟಿದ್ದು ಅದರಲ್ಲಿ ಯಶಸ್ಸನ್ನೂ ಕಂಡಿದೆ. ಮುಂದೆಯೂ ಪೊಲೀಸ್ ಇಲಾಖೆ ದಂಧೆಕೋರರನ್ನು ನಿಯಂತ್ರಿಸಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರಂತರ ಶ್ರಮಿಸುವ ಅಗತ್ಯವಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು