11:01 AM Friday21 - March 2025
ಬ್ರೇಕಿಂಗ್ ನ್ಯೂಸ್
ಶಿವಮೊಗ್ಗ ಜನೌಷಧಿ ಕೇಂದ್ರದಲ್ಲಿ ಇತರ ಔಷಧಿ, ಮಾತ್ರೆಗಳ ಮಾರಾಟ: ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ… Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ… ಅಂಗನವಾಡಿ: 2011ರ ನಂತರ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿ; ಸಿಎಂ ಜೊತೆ ಚರ್ಚಿಸಿ ಕ್ರಮ: ಸಚಿವೆ… Legislative Council | ಜಲ‌ ಮತ್ತು ವಾಯು ಕಾಯ್ದೆ ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ… ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ.… Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ… ಬೆಂಗಳೂರು: 20ರಿಂದ 4 ದಿನಗಳ ಕಾಲ ಲೇಸರ್ ಚಿಕಿತ್ಸೆ, ಸರ್ಜರಿ ಅಂತಾರಾಷ್ಟ್ರೀಯ ಸಮ್ಮೇಳನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; ಬೇಡಿಕೆ… ರಾಜ್ಯದ ನೀರಾವರಿ ಯೋಜನೆಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಬೊಮ್ಮಾಯಿ: ಕೃಷ್ಣಾ ಮೇಲ್ದಂಡೆ, ಮಹಾದಾಯಿ… APMC | ಯಶವಂತಪುರದಿಂದ 4 ಕೃಷಿ ಉತ್ಪನ್ನ ಶಿಫ್ಟ್: ದಾಸನಪುರ ಉಪ ಮಾರುಕಟ್ಟೆಗೆ…

ಇತ್ತೀಚಿನ ಸುದ್ದಿ

BJP MP | ಗುತ್ತಿಗೆಯಲ್ಲಿ ಶೇ.4ರಷ್ಟು ಮುಸ್ಲಿಂ ಮೀಸಲಾತಿ ವಿರುದ್ಧ ಹೈಕೋರ್ಟ್​​ ಮೊರೆ ಹೋಗುವೆ: ಸಂಸದ ತೇಜಸ್ವಿ ಸೂರ್ಯ

18/03/2025, 11:53

ನವದೆಹಲಿ(reporterkarnataka.cm): ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರಕಾರ ಮುಂದಾಗಿರುವುದು ಅಸಾಂವಿಧಾನಿಕವಾಗಿದ್ದು, ಇದರ ವಿರುದ್ಧ ಕರ್ನಾಟಕ ಹೈಕೋರ್ಟ್​​ನಲ್ಲಿ ರಿಟ್​ ಅರ್ಜಿ ಸಲ್ಲಿಸುತ್ತೇವೆ ಎಂದು ಸಂಸದ ತೇಜಸ್ವಿ ಸೂರ್ಯ ಎಚ್ಚರಿಸಿದ್ದಾರೆ.
ಮೀಸಲಾತಿ ನಿರ್ಧಾರ ವಾಪಸ್​ ಪಡೆಯದಿದ್ದಲ್ಲಿ ದೇಶಾದ್ಯಂತ ಹೋರಾಟಕ್ಕೆ ಕರೆ ನೀಡುತ್ತೇವೆ. ಧರ್ಮ ಆಧಾರಿತ ಮೀಸಲಾತಿ ಜಾರಿಗೆ ಬಾರದಂತೆ ನಾವು ಹೋರಾಡುತ್ತೇವೆ. ಸರಕಾರದ ಈ ಆಟಾಟೋಪಕ್ಕೆ ಕೊನೆ ಹಾಡುತ್ತೇವೆ ಎಂದರು.
ರಾಜ್ಯ ಸರಕಾರ ಬಜೆಟ್​​​ನಲ್ಲಿ ಸರಕಾರಿ ಟೆಂಡರ್​​ಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಲು ತೆಗೆದುಕೊಂಡಿರುವ ಕ್ರಮ ಸಂವಿಧಾನಕ್ಕೆ ಮಾಡಿದ ಅಪಚಾರ. ಸಂವಿಧಾನಡಿ ಧರ್ಮದ ಆಧಾರದಲ್ಲಿ ಮೀಸಲಾತಿಗೆ ಅವಕಾಶವಿಲ್ಲ. ಹಲವು ಬಾರಿ ಸುಪ್ರೀಂ ಕೋರ್ಟ್​​, ಅನೇಕ ನ್ಯಾಯಾಲಗಳು ಈ ರೀತಿ ಮೀಸಲಾತಿ ನೀಡಬಾರದು ಎಂದಿವೆ. ಮತಬ್ಯಾಂಕ್​​​ಗೋಸ್ಕರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಂಗ್ರೆಸ್​​​​ ಸರ್ಕಾರ ಸಂವಿಧಾನಬಾಹಿರ ಕೆಲಸ ಮಾಡಿದೆ ಎಂದು ದೂರಿದರು.
ಡಾ. ಮನಮೋಹನ್ ಸಿಂಗ್​ ಅವರು​ ಈ ಹಿಂದೆ ಪ್ರಧಾನಿಯಾಗಿದ್ದಾಗ ದೇಶದ ಸಂಪತ್ತಿನ ಮೇಲೆ ಮುಸಲ್ಮಾನರಿಗೆ ಪ್ರಥಮ ಹಕ್ಕಿರಬೇಕು ಎಂದಿದ್ದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಮುಸ್ಲಿಂ ಸಮುದಾಯದವರಿದ್ದಾರೋ ಅಷ್ಟು ಶೇಕಡಾವಾರು ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ನಾಯಕ
ರಾಹುಲ್​ ಗಾಂಧಿ ಹೇಳಿದ್ದರು. ಇದನ್ನು ಮುಂದುವರಿಸಿಕೊಂಡು ಸಿದ್ದರಾಮಯ್ಯ ಅವರು ಕಾನೂನುಬಾಹಿರವಾಗಿ ಶೇ.4ರಷ್ಟು ಮೀಸಲಾತಿ ಕಲ್ಪಿಸಿದ್ದಾರೆ ಎಂದು ಕಿಡಿಕಾರಿದರು.
ಸಂವಿಧಾನ ರಚನೆ ವೇಳೆ ಧರ್ಮದ ಆಧಾರದಲ್ಲಿ ಮೀಸಲಾತಿ ವಿಷಯ ಚರ್ಚೆಗೆ ಬಂದಾಗ, ಮೊದಲು ಇದನ್ನು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೇ ವಿರೋಧಿಸಿದ್ದರು. ಧರ್ಮದ ಆಧಾರದಲ್ಲಿ ಮೀಸಲಾತಿ ಕಲ್ಪಿಸಿದ್ದಲ್ಲಿ ದೇಶ ವಿಭಜನೆ, ನುಚ್ಚು ನೂರಾಗುತ್ತದೆ. ಇದನ್ನು ನಾವು ವಿರೋಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದರು. ತಮ್ಮನ್ನ ತಾವು ಅಂಬೇಡ್ಕರ್ ವಾದಿ, ಸಮಾಜವಾದಿ ಎಂದು ಕರೆದುಕೊಳ್ಳುವ ಸಿದ್ದರಾಮಯ್ಯ ಅವರು ಸಂವಿಧಾನ ವಿರೋಧ, ಅಂಬೇಡ್ಕರ್ ಅವರ ನಿಲುವಿಗೆ ವಿರೋಧದ ಕೆಲಸ ಮಾಡಿದ್ದಾರೆ. ಈ ಅಸಾಂವಿಧಾನಿಕ ನಡೆಯ ವಿರುದ್ಧ ನಾವು ವಿಧಾನಸಭೆ, ಸಂಸತ್​ನಲ್ಲೂ ಧ್ವನಿ ಎತ್ತುತ್ತೇವೆ ಎಂದು ತೇಜಸ್ವಿ ಸೂರ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು