12:05 PM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ: ಚಿತ್ತಾರಿಯ ಗಿರೀಶ್ ಪಿ. ಎಂ. ಸಾಧನೆಗೆ ಸನ್ಮಾನ

18/03/2025, 11:56

ಕಾಸರಗೋಡು(reporterkarnataka.com): ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ, ಕಲಾವಿದರುಗಳಿಗೆ ವಿವಿಧ ಪರೀಕ್ಷೆಗಳಲ್ಲಿ, ಸ್ಪರ್ಧೆಗಳಲ್ಲಿ ಉನ್ನತ ಶ್ರೇಣಿ ಯಲ್ಲಿ ಉತ್ತೀರ್ಣರಾದಾಗ ಸಂಘ ಸಂಸ್ಥೆಗಳು, ಸಾರ್ವಜನಿಕರು ಅಭಿನಂದಿಸಿ ಬೆನ್ನು ತಟ್ಟಿದಾಗ, ಅದು ಉತ್ತೀರ್ಣರಾದವರೀಗೆ ಮಾತ್ರವಲ್ಲ ಉಳಿದವರೀಗೂ ಪ್ರೇರಣೆಯಾಗುತ್ತದೆ ಎಂದು ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಜಿಲ್ಲಾ ಸಂಘ ಉಪಾಧ್ಯಕ್ಷೆ ಉಶಾಕಿರಣ್ ಹೇಳಿದರು.
ಅವರು ಕಾಸರಗೋಡು ಕನ್ನಡ ಭವನದಲ್ಲಿ “ಮಂಗಳೂರು ವಿಶ್ವವಿದ್ಯಾಲಯ 2023-24 ನೇ ಸಾಲಿನ ಸ್ನಾತಕೋತ್ತರ ಪರೀಕ್ಷೆಯಲ್ಲಿ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಷಯದಲ್ಲಿ ಪ್ರಥಮ ಸ್ಥಾನ ಚಿನ್ನದ ಪದಕದೊಂದಿಗೆ ಪಡೆದ ಕಾಸರಗೋಡು ಜಿಲ್ಲೆಯ ಚಿತ್ತಾರಿಯ ಗಿರೀಶ್ ಪಿ. ಎಂ. ಅವರ ಸಾಧನೆಗೆ ನೀಡಿದ ಅಭಿನಂದನಾ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಭವನದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಮರಾಜ ಕ್ಷತ್ರಿಯ ಕೂಡ್ಲು ಉಪಸಂಘ ಅಧ್ಯಕ್ಷ ಸತೀಶ್ ಕೂಡ್ಲು, ವಿಶ್ವ ರಾಮಕ್ಷತ್ರಿಯ ಮಹಾಸಂಘ ಸಂಘಟನಾ ಕಾರ್ಯದರ್ಶಿ ಸಂಧ್ಯಾರಾಣಿ ಟೀಚರ್, ಎಡನೀರು ಹೈಯರ್ ಸೆಕೆಂಡರಿ ಅಧ್ಯಾಪಕ ಪ್ರವೀಣ್ ಶೆಟ್ಟಿ ಮಾಸ್ಟರ್, ಅಭಿನಂದನಾ ಮಾತುಗಳನ್ನಾಡಿದರು. ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಅತಿಥಿಗಳು ಶಾಲು ಹೊದಿಸಿ, ಹಾರ ತೊಡಿಸಿ, ಅಭಿನಂದನ ಪತ್ರ, ಸ್ಮರಣಿಕೆ ನೀಡಿ ಗಿರೀಶ್ ಪಿ ಎಂ ಅವರನ್ನು ಅಭಿನಂದಿಸಿದರು. ಕನ್ನಡ ಭವನದ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೋಟೆಕಣಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಂಧ್ಯಾ ರಾಣಿ ಟೀಚರ್ ವಂದಿಸಿದರು.
ಅಭಿನಂದನೆ ಸ್ವೀಕರಿಸಿದ ಗಿರೀಶ್ ಪಿ. ಎಂ. ಹರ್ಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು